ಎಎಪಿ ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ‘ಬಿಜೆಪಿ ಆಡಳಿತದಲ್ಲಿ ಬೆಂಗಳೂರು ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ರಸ್ತೆ ಗುಂಡಿಗಳು, ಕಸದ ಅವೈಜ್ಞಾನಿಕ ವಿಲೇವಾರಿ, ಮಳೆ ಬಂದರೆ ಮನೆಗಳಿಗೆ ನುಗ್ಗುವ ನೀರು–ಒಂದೆಡೆ ಈ ಸಮಸ್ಯೆಗಳು; ಸರ್ಕಾರಿ ಶಾಲೆ, ಆರೋಗ್ಯ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳಿಲ್ಲದೇ ಇರುವುದು ಇನ್ನೊಂದು ಕಡೆ ಎದ್ದುಕಾಣುತ್ತದೆ‘ ಎಂದು ಆರೋಪಿಸಿದರು.