ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಡಿಕೆಶಿ ಭಾವ ಶರಶ್ಚಂದ್ರಗೆ ಎಎಪಿ ಟಿಕೆಟ್‌

Last Updated 13 ಮಾರ್ಚ್ 2023, 23:15 IST
ಅಕ್ಷರ ಗಾತ್ರ

ರಾಮನಗರ: ಆಮ್‌ ಆದ್ಮಿ ಪಕ್ಷ ಜಿಲ್ಲೆಯ ನಾಲ್ಕು ಕ್ಷೇತ್ರಗಳಿಗೆ ಸೋಮವಾರ ಅಭ್ಯರ್ಥಿಗಳನ್ನು ಘೋಷಿಸಿದೆ. ಚನ್ನಪಟ್ಟಣದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಭಾವ ಶರಶ್ಚಂದ್ರ ಕಣಕ್ಕೆ ಇಳಿಯಲಿದ್ದಾರೆ.

‘ಚನ್ನಪಟ್ಟಣದಿಂದ ಶರಶ್ಚಂದ್ರ, ರಾಮನಗರದಿಂದ ನಂಜಪ್ಪ ಕಾಳೇಗೌಡ, ಮಾಗಡಿಯಿಂದ ರವಿಕಿರಣ್ ಹಾಗೂ ಕನಕಪುರದಿಂದ ಪುಟ್ಟರಾಜು ಸ್ಪರ್ಧೆ ಮಾಡಲಿದ್ದಾರೆ. ಕೆಲವೇ ದಿನದಲ್ಲಿ ಪಕ್ಷ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ’ ಎಂದು ಎಎಪಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದಲ್ಲಿ 4ರಿಂದ 6 ಕಡೆ ಬೃಹತ್‌ ಸಮಾವೇಶ ಆಯೋಜಿಸಲು ಚಿಂತನೆ ನಡೆದಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪ್ರಚಾರದ ನೇತೃತ್ವ ವಹಿಸಲಿದ್ದಾರೆ ಎಂದು ತಿಳಿಸಿದರು. ಉದ್ಯಮಿ ಶರಶ್ಚಂದ್ರ ಚನ್ನಪಟ್ಟಣದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು. ಡಿ.ಕೆ. ಸಹೋದರರು ಆಸಕ್ತಿ ತೋರದ ಕಾರಣ ಈಚೆಗೆ ಆಮ್ ಆದ್ಮಿ ಪಕ್ಷ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT