3 ಪಕ್ಷಗಳ ನಾಯಕತ್ವ ಬದಲಾಗದಿದ್ದರೆ ಎಎಪಿ ಅಧಿಕಾರಕ್ಕೆ: ಬಿಜೆಪಿಯ ಲೆಹರ್ ಸಿಂಗ್

ಬೆಂಗಳೂರು: ‘ರಾಜ್ಯದಲ್ಲಿ ಪ್ರಮುಖವಾಗಿರುವ ಮೂರೂ ಪಕ್ಷಗಳ ನಾಯಕತ್ವ ಬದಲಾವಣೆಯಾಗದಿದ್ದರೆ ಅವುಗಳು ದೂಳಿಪಟವಾಗುತ್ತವೆ. ದೆಹಲಿ ರೀತಿಯಲ್ಲಿ ಆಮ್ ಆದ್ಮಿ ಪಕ್ಷವು ಎಲ್ಲರನ್ನೂ ದೂಳಿಪಟ ಮಾಡುತ್ತದೆ’ ಎಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ಗೆ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಎಚ್ಚರಿಕೆ ನೀಡಿದರು.
ವಿಧಾನ ಪರಿಷತ್ನಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಲೆಹರ್ ಸಿಂಗ್, ‘ನಾನು 12 ವರ್ಷಗಳಿಂದ ಸದನದಲ್ಲಿದ್ದೇನೆ. ಪಕ್ಷ ನನಗೆ ಎರಡು ಅವಧಿಗೆ ಅವಕಾಶ ನೀಡಿದೆ. ಮತ್ತೆ ನಾನು ಅವಕಾಶ ಕೇಳುವುದಿಲ್ಲ. ಹೊಸಬರಿಗೆ ಅವಕಾಶ ಮಾಡಿಕೊಡಬೇಕಾಗುತ್ತದೆ. ಹಾಗಾಗಿ, ಇದೇ ನನ್ನ ಕಡೆಯ ಭಾಷಣ’ ಎಂದು ಹೇಳಿದರು.
ದಕ್ಷಿಣ ರೈಲ್ವೆಗೆ ₹59 ಕೋಟಿ, ಉತ್ತರಕ್ಕೆ ₹13,200 ಕೋಟಿ: ಕನಿಮೋಳಿ ತರಾಟೆ
‘ಇವತ್ತು ಜಾತಿ ಆಧಾರದಲ್ಲಿ ನಿಗಮ-ಮಂಡಳಿಗೆ ನೇಮಕ ಮಾಡಲಾಗುತ್ತಿದೆ. ಅದೇ ರೀತಿ ಜಾತಿ ಆಧಾರದ ಮೇಲೆಯೇ ಬಜೆಟ್ ರೂಪಿಸಲಾಗುತ್ತಿದೆ. ಇಂತಹ ವ್ಯವಸ್ಥೆ ಬದಲಾಗಬೇಕು’ ಎಂದು ಸಲಹೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.

