ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆ ಪತ್ರಗಳನ್ನು ಬೆಂಗಳೂರಿನಲ್ಲಿ ಗುರುವಾರದಂದು ಕೌಶಲ್ಯಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಅವರಿಂದ ಡಾ.ಗಂಗಿರೆಡ್ಡಿ ಅವರು ಪಡೆದುಕೊಂಡಿದ್ದಾರೆ. ರೆಡ್ಡಿ ಅವರಿಂದ ವೀಸಾ, ವಿಮಾನ ಪ್ರಯಾಣ, ವಿಮೆ, ವಸತಿ ಇತ್ಯಾದಿಗಳ ಯಾವುದೇ ಸೇವಾ ಶುಲ್ಕವನ್ನು ಪಡೆಯದೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿಕೊಡಲಾಗಿದೆ. ಈ ನಿಟ್ಟಿನಲ್ಲಿ ಡಾ.ಗಂಗಿರೆಡ್ಡಿ ಅವರಿಗೆ ಅಭಿನಂದನೆಗಳು. ಅವರ ಉತ್ತಮ ಕಾರ್ಯನಿರ್ವಹಣೆಯಿಂದ ರಾಜ್ಯದ ಇನ್ನಷ್ಟು ವೈದ್ಯರಿಗೆ ಆ ದೇಶಗಳಲ್ಲಿ ಉದ್ಯೋಗ ಸಿಗಲಿ ಎಂದು ಡಾ.ಅಶ್ವತ್ಥನಾರಾಯಣ ಹಾರೈಸಿದರು.