ಮಂಗಳವಾರ, ಮಾರ್ಚ್ 28, 2023
29 °C

ಬಿಲ್ ಪಾಸ್ ಮಾಡಲು ₹50 ಸಾವಿರ‌ ಲಂಚ ಬೇಡಿಕೆ: ಎಸಿಬಿ ಬಲೆಗೆ ಕೃಷಿ ಸಹಾಯಕ ನಿರ್ದೇಶಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ರೈತರಿಗೆ ನೀಡಿದ್ದ ‌ಸಲಕರಣೆಗಳ ಬಿಲ್ ಪಾಸ್ ಮಾಡಲು ₹ 50 ಸಾವಿರ‌ ಲಂಚ ಪಡೆಯುತ್ತಿದ್ದ ಜೇವರ್ಗಿ ಸಹಾಯಕ ಕೃಷಿ ನಿರ್ದೇಶಕ ಸುನೀಲಕುಮಾರ ಯರಗೋಳ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಜೇವರ್ಗಿ ರೈತ ಶರಣಗೌಡ ಎಂಬುವವರ ಬಿಲ್ ಪಾಸ್  ಮಾಡಲು ₹ 1.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಆ ಪೈಕಿ ₹ 50 ಸಾವಿರ ಹಣವನ್ನು ಪಡೆಯುತ್ತಿದ್ದ ವೇಳೆ ನಗರದ ಕನ್ನಡ ಭವನದ ಬಳಿ ಎಸಿಬಿ ಡಿವೈಎಸ್ಪಿ‌ ಮಹೇಶ ಮೇಘಣ್ಣವರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು