ಕಲಬುರ್ಗಿ: ರೈತರಿಗೆ ನೀಡಿದ್ದಸಲಕರಣೆಗಳ ಬಿಲ್ ಪಾಸ್ ಮಾಡಲು ₹ 50 ಸಾವಿರ ಲಂಚ ಪಡೆಯುತ್ತಿದ್ದ ಜೇವರ್ಗಿ ಸಹಾಯಕ ಕೃಷಿ ನಿರ್ದೇಶಕ ಸುನೀಲಕುಮಾರ ಯರಗೋಳ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಜೇವರ್ಗಿ ರೈತ ಶರಣಗೌಡ ಎಂಬುವವರ ಬಿಲ್ ಪಾಸ್ ಮಾಡಲು ₹ 1.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಆ ಪೈಕಿ ₹ 50 ಸಾವಿರ ಹಣವನ್ನು ಪಡೆಯುತ್ತಿದ್ದ ವೇಳೆ ನಗರದ ಕನ್ನಡ ಭವನದ ಬಳಿ ಎಸಿಬಿ ಡಿವೈಎಸ್ಪಿ ಮಹೇಶ ಮೇಘಣ್ಣವರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.