‘ಇಬ್ಬರೂ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿರುವ ಎಸಿಬಿ ಬೆಂಗಳೂರು ನಗರ ಘಟಕದ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆಗೆ ಅಗತ್ಯವಿರುವ ಕಡತಗಳನ್ನು ಒದಗಿಸುವಂತೆ ಲೀಲಾವತಿ ಅವರಿಗೆ ಸೂಚಿಸಲಾಗಿತ್ತು. ಆದರೆ, ಕಡತಗಳನ್ನು ಒದಗಿಸದೇ ಅಸಹಕಾರ ತೋರುತ್ತಿದ್ದರು. ಈ ಕಾರಣದಿಂದ ಅವರನ್ನು ಬಂಧಿಸಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಎಸಿಬಿ ತಿಳಿಸಿದೆ.