‘ಭ್ರಷ್ಟಾಚಾರ ತಡೆ(ಪಿ.ಸಿ) ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಅರಿವಿನ ಅಪರಾಧ ಎಂದು ದೂರು ದಾಖಲಾಗಿರುವ ಕಾರಣ ತನಿಖೆ ರದ್ದುಗೊಳಿಸಲು ಆಗುವುದಿಲ್ಲ. ಸಾರ್ವಜನಿಕರ ಕೋಟ್ಯಾಂತರ ರೂಪಾಯಿ ವಂಚಿಸಲಾಗಿದೆ ಎಂಬ ಆರೋಪ ಇದ್ದು, ಸತ್ಯಾಂಶ ಹೊರಗೆ ಬರಬೇಕಾಗಿದೆ’ ಎಂದು ನ್ಯಾಯಮೂರ್ತಿ ಪಿ.ಕೃಷ್ಣಭಟ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.