ಎಸಿಬಿ ಸ್ಥಾಪಿಸಿದಾಗ, ಲೋಕಾಯುಕ್ತಕ್ಕೆ ಇದ್ದ ಪೊಲೀಸ್ ಬಲವನ್ನು ಕಿತ್ತುಕೊಂಡು ಅದನ್ನು ಎಸಿಬಿಗೆ ವರ್ಗಾಯಿಸಲಾಗಿತ್ತು. ಅಲ್ಲದೇ, ಯಾವುದೇ ಪ್ರಕರಣದಲ್ಲಿ ದಾಳಿ, ಶೋಧ ನಡೆಬೇಕಾದರೆ ಮುಖ್ಯಕಾರ್ಯದರ್ಶಿ ನೇತೃತ್ವದ ಉನ್ನತ ಸಮಿತಿಯ ಪೂರ್ವಾನುಮತಿಯನ್ನೂ ಪಡೆಯಬೇಕಾಗಿತ್ತು. ಹೀಗಾಗಿ, ಸರ್ಕಾರದ ಆಣತಿಯಂತೆ ಎಸಿಬಿ ನಡೆಯುತ್ತಿದೆ ಎಂಬ ಆಪಾದನೆಯೂ ತನಿಖಾ ಸಂಸ್ಥೆಯ ಮೇಲೆ ಇತ್ತು.