<p><strong>ಬೆಂಗಳೂರು</strong>: ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದಲ್ಲಿ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಿ.ಟಿ. ಆಂಜನಪ್ಪ ಅವರ ಬೆಂಗಳೂರು ಮತ್ತು ದಾವಣಗೆರೆ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ.</p>.<p>ಬಿಬಿಎಂಪಿ ಬೊಮ್ಮನಹಳ್ಳಿ ಉಪವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬೆಂಗಳೂರಿನ ಜೀವನಬಿಮಾನಗರದಲ್ಲಿನ ವಾಸದ ಮನೆ, ಸ್ವಂತ ಊರಾದ ದಾವಣಗೆರೆ ಜಿಲ್ಲೆಯ ಲೋಕಿಕೆರೆ ಗ್ರಾಮದ ವಾಸದ ಮನೆ, ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿಯಲ್ಲಿರುವ ತೋಟದ ಮನೆ, ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.</p>.<p>ಶೋಧದ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು ಪತ್ತೆಯಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದಲ್ಲಿ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಿ.ಟಿ. ಆಂಜನಪ್ಪ ಅವರ ಬೆಂಗಳೂರು ಮತ್ತು ದಾವಣಗೆರೆ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ.</p>.<p>ಬಿಬಿಎಂಪಿ ಬೊಮ್ಮನಹಳ್ಳಿ ಉಪವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬೆಂಗಳೂರಿನ ಜೀವನಬಿಮಾನಗರದಲ್ಲಿನ ವಾಸದ ಮನೆ, ಸ್ವಂತ ಊರಾದ ದಾವಣಗೆರೆ ಜಿಲ್ಲೆಯ ಲೋಕಿಕೆರೆ ಗ್ರಾಮದ ವಾಸದ ಮನೆ, ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿಯಲ್ಲಿರುವ ತೋಟದ ಮನೆ, ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.</p>.<p>ಶೋಧದ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು ಪತ್ತೆಯಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>