ಬೆಂಗಳೂರು: ಕಾಮಗಾರಿ ಪೂರ್ಣಗೊಂಡಿದ್ದ ಖಾಸಗಿ ಕಟ್ಟಡದ ಸ್ವಾಧೀನಾನುಭವ ಪ್ರಮಾಣಪತ್ರ (ಒ.ಸಿ) ನೀಡಲು ₹ 20 ಲಕ್ಷ ಲಂಚ ಪಡೆಯುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಬೊಮ್ಮನಳ್ಳಿ ವಲಯದ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)/ಶುಕ್ರವಾರ ಬಂಧಿಸಿದೆ.