ಕೈಗಾರಿಕೆಗಳು, ಕಾರ್ಖಾನೆಗಳು, ಬೃಹತ್ ಮಳಿಗೆಗಳು, ಮಾಲ್ಗಳು, ಖಾಸಗಿ ಕಚೇರಿಗಳು, ಹೋಟೆಲ್ಗಳು, ಒಳಾಂಗಣ ವಿನ್ಯಾಸಕರು ಮತ್ತು ಕಟ್ಟಡ ನಿರ್ಮಾಣ ಮಾಡುವವರಿಗೆ ಕಾರ್ಮಿಕ ಕಾಯ್ದೆ, ನಿಯಮಗಳ ಉಲ್ಲಂಘನೆ ಆರೋಪದಡಿ ನೋಟಿಸ್ ಜಾರಿ ಮಾಡಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳು, ಭಾರಿ ಪ್ರಮಾಣದ ಲಂಚ ವಸೂಲಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಎಸಿಬಿ ಬೆಂಗಳೂರು ನಗರ ಘಟಕದ ಅಧಿಕಾರಿಗಳಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಎಫ್ಐಆರ್ ದಾಖಲಿಸಿ, ಶೋಧ ನಡೆಸಲಾಗಿದೆ.