<p><strong>ಹಟ್ಟಿ ಚಿನ್ನದಗಣಿ (ರಾಯಚೂರು ಜಿಲ್ಲೆ):</strong> ಲಿಂಗಸುಗೂರು ತಾಲ್ಲೂಕಿನ ಗೋಲಪಲ್ಲಿ ಬಳಿ ಶ್ರೀರಂಗಪಟ್ಟಣ–ಹುಮನಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ಮಧ್ಯೆ ಕಾರು ಸಿಕ್ಕಿಕೊಂಡು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಅಣ್ಣ–ತಂಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತರ ತಂದೆ–ತಾಯಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಕೋಳೂರ ಗ್ರಾಮದ ಹರ್ಷಿತಾ (16), ಭುವನ್ (17) ಅವರ ದೇಹಗಳು ಅಪಘಾತದ ರಭಸಕ್ಕೆ ಛಿದ್ರಗೊಂಡಿದ್ದವು.</p>.<p>ಹರ್ಷಿತಾ ಮತ್ತು ಭುವನ್ ದಾವಣಗೆರೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರನ್ನುಬಿಟ್ಟುಬರಲು ಪಾಲಕರು ಕಾರಿನಲ್ಲಿ ದಾವಣಗೆರೆಗೆ ತೆರಳುತ್ತಿದ್ದರು.</p>.<p class="Subhead">ಮತ್ತೊಂದು ಅಪಘಾತ: ಈ ಅಪಘಾತ ಸ್ಥಳದ ಸನಿಹವೇವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ ಅವರು ಪ್ರಯಾಣಿಸುತ್ತಿದ್ದ ಕಾರು ಮಗುಚಿ ಬಿದ್ದಿದೆ. ಆದರೆ, ಯಾರಿಗೂಗಾಯಗಳಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದಗಣಿ (ರಾಯಚೂರು ಜಿಲ್ಲೆ):</strong> ಲಿಂಗಸುಗೂರು ತಾಲ್ಲೂಕಿನ ಗೋಲಪಲ್ಲಿ ಬಳಿ ಶ್ರೀರಂಗಪಟ್ಟಣ–ಹುಮನಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ಮಧ್ಯೆ ಕಾರು ಸಿಕ್ಕಿಕೊಂಡು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಅಣ್ಣ–ತಂಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತರ ತಂದೆ–ತಾಯಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಕೋಳೂರ ಗ್ರಾಮದ ಹರ್ಷಿತಾ (16), ಭುವನ್ (17) ಅವರ ದೇಹಗಳು ಅಪಘಾತದ ರಭಸಕ್ಕೆ ಛಿದ್ರಗೊಂಡಿದ್ದವು.</p>.<p>ಹರ್ಷಿತಾ ಮತ್ತು ಭುವನ್ ದಾವಣಗೆರೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರನ್ನುಬಿಟ್ಟುಬರಲು ಪಾಲಕರು ಕಾರಿನಲ್ಲಿ ದಾವಣಗೆರೆಗೆ ತೆರಳುತ್ತಿದ್ದರು.</p>.<p class="Subhead">ಮತ್ತೊಂದು ಅಪಘಾತ: ಈ ಅಪಘಾತ ಸ್ಥಳದ ಸನಿಹವೇವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ ಅವರು ಪ್ರಯಾಣಿಸುತ್ತಿದ್ದ ಕಾರು ಮಗುಚಿ ಬಿದ್ದಿದೆ. ಆದರೆ, ಯಾರಿಗೂಗಾಯಗಳಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>