ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರ ಜೊತೆ ಕೊಲೆ ಆರೋಪಿ ಫೋಟೊ!

Last Updated 21 ಫೆಬ್ರುವರಿ 2023, 21:46 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲದಲ್ಲಿ ಕ್ರಿಕೆಟ್‌ ಪಂದ್ಯಾವಳಿ ವೇಳೆ ನಡೆದ ಜೋಡಿ ಕೊಲೆ ಪ್ರಕರಣದ ಮೊದಲ ಆರೋಪಿ ಹುಲಿಕುಂಟೆ ಗ್ರಾಮದ ವಿನಯ್‌ಗೆ ಬಿಜೆಪಿಯ ಪ್ರಭಾವಿ ಸಚಿವ ಮತ್ತು ಮುಖಂಡರ ಜೊತೆ ಸಂಪರ್ಕವಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಸಚಿವ ಆರ್‌. ಅಶೋಕ, ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಧೀರಜ್‌ ಮುನಿರಾಜು ಮತ್ತು ಆರೋಪಿ ವಿನಯ್‌ ಜೊತೆಗಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಎಂದು ಕೆಪಿಸಿಸಿ ರಾಜ್ಯ ಮಾಧ್ಯಮ ಕಾರ್ಯದರ್ಶಿ
ಜಿ.ಲಕ್ಷ್ಮಿಪತಿ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಯ್‌ ಕಾಂಗ್ರೆಸ್‌ ಬೆಂಬಲಿಗ ಎಂದು ಬಿಂಬಿಸಲು ಯತ್ನಿಸಿದ್ದ ಬಿಜೆಪಿಯವರ ಅಸಲಿ ಮುಖ ಈಗ ಬಯಲಾಗಿದೆ ಎಂದರು. ಆರೋಪಿ ವಿನಯ್‌, ಸಚಿವ ಅಶೋಕ ಮತ್ತು ಬಿಜೆಪಿ ಮುಖಂಡರು ಜೊತೆಗಿರುವ ಫೋಟೊಗಳನ್ನು ಅವರು ತಮ್ಮ ಮೊಬೈಲ್‌ನಲ್ಲಿ ತೋರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT