ಪ್ರಕರಣದ ವಿಚಾರಣೆಯನ್ನು ಧಾರವಾಡದಲ್ಲೇ ನಡೆಸುವಂತೆ ಆರೋಪಿಗಳು ನ್ಯಾಯಾಲಯವನ್ನು ಕೇಳಿಕೊಂಡರು. ಜತೆಗೆ ತಮ್ಮನ್ನು ಭೇಟಿಯಾಗಲು ಬಂದ ಕುಟುಂಬದವರು ಹಾಗೂ ವಕೀಲರೊಂದಿಗೆ ಮಾತನಾಡಲು ಅವಕಾಶ ಕೋರಿದರು.ಇವುಗಳಲ್ಲಿ ಭೇಟಿಯ ಕೋರಿಕೆಯನ್ನು ಮಾನ್ಯ ಮಾಡಿದ ನ್ಯಾಯಾಧೀಶರು, ನ್ಯಾಯಾಲಯದ ಆವರಣದಲ್ಲೇ ಭೇಟಿಗೆ ಅವಕಾಶ ನೀಡಿದರು.