ಬೆಂಗಳೂರು: ‘ವಿದೇಶಿ ಹಾಗೂ ಆಂತರಿಕ ಗೂಢಚರ್ಯೆ ಬಲಪಡಿಸಲು ಬೇಕಾದ ಕ್ರಮಗಳ ಬಗ್ಗೆ ಎಲ್ಲ ಪಕ್ಷಗಳ ಅಭಿಪ್ರಾಯ ಪಡೆದು ಹಿರಿಯಣ್ಣನ ಪಾತ್ರ ವಹಿಸಬೇಕಿದ್ದ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಾಯಕರು, ರಾಜಕೀಯ ಲಾಭಕ್ಕಾಗಿ ಆರೋಪ ಗಳನ್ನು ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ’ ಎಂದು ಮಾಜಿ ಸಂಸದ ಕಾಂಗ್ರೆಸ್ನ ಆರ್. ಧ್ರುವನಾರಾಯಣ ಹೇಳಿದ್ದಾರೆ.