ಗ್ರಾಮದ ಹೊರವಲಯದಲ್ಲಿ ಬುಧವಾರ ಸಮೀಕ್ಷೆಗೆ ಬಂದಿದ್ದ ರೈಲ್ವೆ ಇಲಾಖೆಯ ಅಧಿಕಾರಿಗಳ ಎದುರು ವಿರೋಧ ದಾಖಲಿಸಿದ ಅವರು, ‘ಫಲವತ್ತಾದ ಕೃಷಿ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ಕೊಡುವುದಿಲ್ಲ. ಈ ಜಮೀನುಗಳನ್ನು ಕಳೆದುಕೊಂಡು ಬೀದಿಗೆ ಬೀಳುವುದಕ್ಕೆ ನಾವು ಸಿದ್ಧವಿಲ್ಲ. ಬೇರೆ ಜಾಗವನ್ನು ಆಯ್ಕೆ ಮಾಡಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.