ರಾಜ್ಯದಲ್ಲಿ ಇತ್ತೀಚೆಗೆ ಸೈಬರ್ ವಂಚನೆಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ವಂಚನೆಗೆ ಒಳಗಾದ ಅಮಾಯಕರಿಗೆ ಪ್ರಕರಣ ದಾಖಲಿಸಿದ ನಂತರ ಸರಿಯಾಗಿ ನ್ಯಾಯವೇ ಸಿಗುತ್ತಿಲ್ಲ. ತಪ್ಪಿತಸ್ಥರನ್ನು ಬಂಧಿಸುವಲ್ಲಿ ಸೈಬರ್ ಪೊಲೀಸ್ ಇಲಾಖೆ ಹಿಂದೆ ಬಿದ್ದಿದೆ. ಸರ್ಕಾರ ಎಚ್ಚೆತ್ತು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ದತ್ತಾಂಶ ಕಳ್ಳತನ ಮಾಡದ ರೀತಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಬೇಕು.