ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರ ನಿಷೇಧ: ಲವ್ ಜಿಹಾದ್‌ ವಿರುದ್ಧವೂ ಕ್ರಮ -ಆರಗ ಜ್ಞಾನೇಂದ್ರ

Last Updated 23 ಡಿಸೆಂಬರ್ 2022, 22:15 IST
ಅಕ್ಷರ ಗಾತ್ರ

ಬೆಳಗಾವಿ: ‘ಮತಾಂತರ ನಿಷೇಧ ಕಾಯ್ದೆಯಲ್ಲಿ ಲವ್ ಜಿಹಾದ್ ಪ್ರಕರಣಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಅವಕಾಶವಿದೆ. ಇದರಲ್ಲಿ ಯಾವುದೇ ತೊಡಕುಗಳಿದ್ದರೆ, ತಿದ್ದುಪಡಿ ಮಾಡಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

‘ವಿವಾಹದ ನೆಪದಲ್ಲಿ ಯಾರನ್ನೂ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡುವಂತಿಲ್ಲ. ಬಲವಂತದಿಂದ ಮತಾಂತರ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಲವ್‌ ಜಿಹಾದ್‌ಗೆ ಸಂಬಂಧಿಸಿ ರಾಜ್ಯದಲ್ಲಿ ಈಗಾಗಲೇ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದರು.

‘ಸ್ವಯಂ ಪ್ರೇರಣೆಯಿಂದ ಮತಾಂತರಗೊಳ್ಳುವವರುಮೊದಲು ಸರ್ಕಾರಕ್ಕೆ ತಿಳಿಸಬೇಕು. ಉತ್ತರ ಪ್ರದೇಶದಲ್ಲಿ ಈ ಕಾಯ್ದೆಗಾಗಿ ಕಾರ್ಯಪಡೆ ರಚಿಸಲಾಗಿದೆ. ಆದರೆ, ಕರ್ನಾಟಕದ ಪರಿಸ್ಥಿತಿವಿಭಿನ್ನವಾಗಿದ್ದು ಇಲ್ಲಿ ಕಾರ್ಯಪಡೆ ಅಗತ್ಯವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT