ಚಿಕ್ಕಮಗಳೂರು: ‘ಅಕ್ರಮ ವಲಸಿಗರನ್ನು ಹೊರಹಾಕಲು ಪ್ರಯತ್ನ ನಡೆಯುತ್ತಿದೆ. ವೀಸಾ ಅವಧಿ ಮುಗಿದಿರುವವರನ್ನು ಬಂಧಿಸಬೇಕು, ಇಲ್ಲವೇ ಹೊರ ದಬ್ಬಬೇಕು. ಈ ಬಗ್ಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೆಲವರು ಉದ್ದೇಶಪೂರ್ವಕವಾಗಿ ಸಣ್ಣಪುಟ್ಟ ಕೇಸು ಹಾಕಿಸಿಕೊಂಡು ಇಲ್ಲಿ ಇರುತ್ತಾರೆ. ಇಲ್ಲಿಯೇ ನೆಲೆಸಲು ಪ್ರಯತ್ನ ನಡೆಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.
‘ಅಕ್ರಮ ವಲಸಿಗರ ಸಮಸ್ಯೆ ಬೆಂಗಳೂರಿನಲ್ಲಿ ಜಾಸ್ತಿ ಇದೆ. ಯಾವ್ಯಾವ ಪ್ರದೇಶದಲ್ಲಿ ಇದ್ದಾರೆ ಎಂಬ ಬಗ್ಗೆ ಸಮೀಕ್ಷೆ ನಡೆಯುತ್ತಿದೆ’ ಎಂದು ಉತ್ತರಿಸಿದರು.