ಶಿವಮೊಗ್ಗ: ಬಿಪಿಎಲ್ ಕಾರ್ಡ್ ಹೊಂದಲು ಹಿಂದೆ ಇದ್ದ ನಿಯಮಗಳನ್ನೇ ಮುಂದುವರಿಸಲಾಗುವುದು. ಆದರೆ, ಶ್ರೀಮಂತರು ಸ್ವಯಂ ಇಚ್ಚೆಯಿಂದ ತಾವು ಪಡೆದ ಕಾರ್ಡ್ಗಳನ್ನು ಹಿಂದಿರುಗಿಸಬೇಕು. ಹಿಂದಿರುಗಿಸದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಜವಾಬ್ದಾರಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.