ಬೆಂಗಳೂರು: ‘ಕೇರಳ, ಗುಜರಾತ್ ಮತ್ತು ಛತ್ತೀಸಗಡ ಮಾದರಿಯಲ್ಲಿ ರಾಜ್ಯದಲ್ಲಿಯೂ ಜಿಲ್ಲಾ ಕೇಂದ್ರ ಸಹಕಾರ (ಡಿಸಿಸಿ) ಬ್ಯಾಂಕ್ಗಳ ವಿಲೀನ ಕುರಿತು ಅಧಿಕಾರಿಗಳ ಜೊತೆ ಈಗಾಗಲೇ ಸಭೆ ನಡೆಸಲಾಗಿದೆ. ಈ ಬಗ್ಗೆ ಅಧ್ಯಯನಕ್ಕೆ ಅಧಿಕಾರಿಗಳ ತಂಡವನ್ನು ಆ ರಾಜ್ಯಗಳಿಗೆ ಕಳುಹಿಸಿ, ಕೇಂದ್ರ ಸರ್ಕಾರಕ್ಕೆ ವರದಿ ರವಾನಿಸಲಾಗುವುದು. ಕೇಂದ್ರದ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.