‘ಸಾರಿಗೆ ನೌಕರರನ್ನು ವಜಾಗೊಳಿಸುವ, ಮನೆ ಖಾಲಿ ಮಾಡಿಸುವ ಹಾಗೂ ವರ್ಗಾವಣೆ ಮಾಡುವ ಮೂಲಕ ಅವರ ಬಲ ಕುಗ್ಗಿಸುವ ಕೆಲಸಕ್ಕೆ ಸರ್ಕಾರ ಕೈಹಾಕಿದೆ. ಆಳುವವರ ಈ ತಂತ್ರ ಫಲಿಸುವುದಿಲ್ಲ. ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದೆ. ಧನಿಕರಿಗೆ ತೆರಿಗೆಯಿಂದ ವಿನಾಯಿತಿ ನೀಡುವ ಈ ಸರ್ಕಾರ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಸರ್ಕಾರದ ಈ ಮೊಂಡು ಹಠದಿಂದಾಗಿಯೇ ಬಿಕ್ಕಟ್ಟು ಉದ್ಭವವಾಗಿದೆ. ಪ್ರಯಾಣಿಕರಿಗೆ ಆಗಿರುವ ತೊಂದರೆಗೆ ಸರ್ಕಾರವೇ ನೇರ ಹೊಣೆ’ ಎಂದು ಆರೋಪಿಸಿದರು.