ಹಲಾಲ್ ಕಟ್ ವಿಚಾರವಾಗಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಚೇತನ್, ‘ಕರ್ನಾಟಕದಲ್ಲಿ ಹಿಂದುತ್ವ ಸಂಘಟನೆಗಳು ಹಲಾಲ್ ಕಟ್ ಮಾಂಸ ಮಾರಾಟಗಾರರನ್ನು ನಿಷೇಧಿಸಲು ಜಟ್ಕಾ ಕಟ್ ಮಾಂಸವನ್ನು ಒತ್ತಾಯಿಸಿ ದಂಗೆ ಎಬ್ಬಿಸುತ್ತಿದ್ದಾರೆ. ನಾವು ಕೊಲ್ಲುವ ಮಾರ್ಗಗಳ ಕುರಿತು ಹೋರಾಡುವ ಬದಲು, ಹೆಚ್ಚಿನ ಜೀವಗಳನ್ನು ರಕ್ಷಿಸುವ ಕೆಲಸ ಮಾಡಬೇಕು ಅಲ್ಲವೆ? ಸದ್ಯದ ಪರಿಸ್ಥಿತಿಯಲ್ಲಿ ಬುದ್ಧನ ಅಹಿಂಸೆಯ ಅಗತ್ಯವಿದೆ’ ಎಂದು ಬರೆದುಕೊಂಡಿದ್ದಾರೆ.