<p><strong>ಮೈಸೂರು</strong>: ‘ಡಿ. 31ರಂದು ಕನ್ನಡದ 3 ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಅಂದೇ ಬಂದ್ಗೆ ಕರೆ ನೀಡಲಾಗಿದೆ. ಆದರೆ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೆಗೆದುಕೊಳ್ಳುವ ತೀರ್ಮಾನದಂತೆ ನಾವೆಲ್ಲರೂ ನಡೆಯುತ್ತೇವೆ’ ಎಂದು ನಟ ಶಿವರಾಜಕುಮಾರ್ ಪರೋಕ್ಷವಾಗಿ ಉದ್ದೇಶಿತ ಕರ್ನಾಟಕ ಬಂದ್ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಅವರು ಇಲ್ಲಿ ಡಿಆರ್ಸಿ ಚಿತ್ರಮಂದಿರದಲ್ಲಿ ‘ಡಾಲಿ’ ಧನಂಜಯ ಅಭಿನಯದ ‘ಬಡವ ರಾಸ್ಕಲ್’ ಸಿನಿಮಾ ವೀಕ್ಷಿಸಿದ ಬಳಿಕ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ನಾಡು, ನುಡಿಗೆ ಅಪಮಾನ ಮಾಡಿರುವ ಕೃತ್ಯವನ್ನು ಸರ್ಕಾರವೂ ಗಂಭೀರವಾಗಿ ಪರಿಗಣಿಸಿದೆ. ನಾಡು-ನುಡಿಯ ಬಗ್ಗೆ ಎಲ್ಲರಲ್ಲೂ ಪ್ರೀತಿ ಇದ್ದೇ ಇರುತ್ತದೆ. ಆದರೆ, ನಮ್ಮಿಂದಲೇ ದ್ರೋಹವಾಗುವ ಸನ್ನಿವೇಶ ಸೃಷ್ಟಿಯಾಗಬಾರದು’ ಎಂದು ಹೇಳಿದರು.</p>.<p>ಎಲ್ಲವೂ ಒಳ್ಳೆಯ ರೀತಿಯಲ್ಲಿ ಆಗಬೇಕು. ಬುದ್ಧಿವಂತಿಕೆಯಿಂದ ಪರಿಸ್ಥಿತಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಎಲ್ಲರ ಮೇಲೆ ಜವಾಬ್ದಾರಿ ಇದೆ ಎಂದು ತಿಳಿಸಿದರು.</p>.<p>‘ನನ್ನ ಅಭಿಯನದ ‘ಭೈರಾಗಿ’ ಚಿತ್ರ ಬಹುತೇಕ ಮುಗಿದಿದ್ದು, ಮಾರ್ಚ್ ಅಥವಾ ಏಪ್ರಿಲ್ಗೆ ತೆರೆ ಕಾಣಲಿದೆ’ ಎಂದು ಹೇಳಿದರು.</p>.<p>‘ಬಡವ ರಾಸ್ಕಲ್’ ಚಿತ್ರದಲ್ಲಿ ಸರಳ ಕತೆಯನ್ನು ತುಂಬಾ ಮನರಂಜನಾತ್ಮಕವಾಗಿ ಪ್ರಸ್ತುತಪಡಿಸಲಾಗಿದೆ ಎಂದು ಶ್ಲಾಘಿಸಿದರು.</p>.<p><strong>ಇದನ್ನೂ ಓದಿ:<a href="https://www.prajavani.net/karnataka-news/kannada-outfits-seek-ban-on-mes-call-for-karnataka-bandh-on-dec-31-895488.html" target="_blank">ಎಂಇಎಸ್ ನಿಷೇಧಕ್ಕೆ 29ರವರೆಗೆ ಗಡುವು: 31ಕ್ಕೆ ಕರ್ನಾಟಕ ಬಂದ್ಗೆ ಕರೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಡಿ. 31ರಂದು ಕನ್ನಡದ 3 ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಅಂದೇ ಬಂದ್ಗೆ ಕರೆ ನೀಡಲಾಗಿದೆ. ಆದರೆ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೆಗೆದುಕೊಳ್ಳುವ ತೀರ್ಮಾನದಂತೆ ನಾವೆಲ್ಲರೂ ನಡೆಯುತ್ತೇವೆ’ ಎಂದು ನಟ ಶಿವರಾಜಕುಮಾರ್ ಪರೋಕ್ಷವಾಗಿ ಉದ್ದೇಶಿತ ಕರ್ನಾಟಕ ಬಂದ್ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಅವರು ಇಲ್ಲಿ ಡಿಆರ್ಸಿ ಚಿತ್ರಮಂದಿರದಲ್ಲಿ ‘ಡಾಲಿ’ ಧನಂಜಯ ಅಭಿನಯದ ‘ಬಡವ ರಾಸ್ಕಲ್’ ಸಿನಿಮಾ ವೀಕ್ಷಿಸಿದ ಬಳಿಕ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ನಾಡು, ನುಡಿಗೆ ಅಪಮಾನ ಮಾಡಿರುವ ಕೃತ್ಯವನ್ನು ಸರ್ಕಾರವೂ ಗಂಭೀರವಾಗಿ ಪರಿಗಣಿಸಿದೆ. ನಾಡು-ನುಡಿಯ ಬಗ್ಗೆ ಎಲ್ಲರಲ್ಲೂ ಪ್ರೀತಿ ಇದ್ದೇ ಇರುತ್ತದೆ. ಆದರೆ, ನಮ್ಮಿಂದಲೇ ದ್ರೋಹವಾಗುವ ಸನ್ನಿವೇಶ ಸೃಷ್ಟಿಯಾಗಬಾರದು’ ಎಂದು ಹೇಳಿದರು.</p>.<p>ಎಲ್ಲವೂ ಒಳ್ಳೆಯ ರೀತಿಯಲ್ಲಿ ಆಗಬೇಕು. ಬುದ್ಧಿವಂತಿಕೆಯಿಂದ ಪರಿಸ್ಥಿತಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಎಲ್ಲರ ಮೇಲೆ ಜವಾಬ್ದಾರಿ ಇದೆ ಎಂದು ತಿಳಿಸಿದರು.</p>.<p>‘ನನ್ನ ಅಭಿಯನದ ‘ಭೈರಾಗಿ’ ಚಿತ್ರ ಬಹುತೇಕ ಮುಗಿದಿದ್ದು, ಮಾರ್ಚ್ ಅಥವಾ ಏಪ್ರಿಲ್ಗೆ ತೆರೆ ಕಾಣಲಿದೆ’ ಎಂದು ಹೇಳಿದರು.</p>.<p>‘ಬಡವ ರಾಸ್ಕಲ್’ ಚಿತ್ರದಲ್ಲಿ ಸರಳ ಕತೆಯನ್ನು ತುಂಬಾ ಮನರಂಜನಾತ್ಮಕವಾಗಿ ಪ್ರಸ್ತುತಪಡಿಸಲಾಗಿದೆ ಎಂದು ಶ್ಲಾಘಿಸಿದರು.</p>.<p><strong>ಇದನ್ನೂ ಓದಿ:<a href="https://www.prajavani.net/karnataka-news/kannada-outfits-seek-ban-on-mes-call-for-karnataka-bandh-on-dec-31-895488.html" target="_blank">ಎಂಇಎಸ್ ನಿಷೇಧಕ್ಕೆ 29ರವರೆಗೆ ಗಡುವು: 31ಕ್ಕೆ ಕರ್ನಾಟಕ ಬಂದ್ಗೆ ಕರೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>