ರಾಮನಗರ ಡಿವೈಎಸ್ಪಿ ಮೋಹನ್ಕುಮಾರ್ ಸುಮಾರು ಅರ್ಧ ಗಂಟೆ ಕಾಲ ನಟಿಯ ವಿಚಾರಣೆ ನಡೆಸಿದರು. ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ರಚಿತಾ ‘ಘಟನೆ ನಡೆದ ದಿನ ನಾನು ಸ್ಥಳದಲ್ಲಿ ಇರಲಿಲ್ಲ. ಈ ಕುರಿತು ಪೊಲೀಸರಿಗೆ ವಿವರಣೆ ನೀಡಿದ್ದೇನೆ. ಕಲಾವಿದನ ಸಾವು ನಿಜಕ್ಕೂ ದುರಂತ. ಆದರೆ ಅದು ಹೇಗೆ ನಡೆಯಿತು ಎಂಬ ಬಗ್ಗೆ ನನಗೆ ತಿಳಿದಿಲ್ಲ. ಸಾಹಸ ದೃಶ್ಯಗಳಲ್ಲಿ ನಟಿಯರಿಗೆ ಹೆಚ್ಚು ಕೆಲಸ ಇರುವುದಿಲ್ಲ. ಹೀಗಾಗಿ ಅಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದು ತಿಳಿಸಿದರು.