‘ಶಾಲಾ ಆಡಳಿತ ಮಂಡಳಿಗಳು ಮತ್ತು ಪೋಷಕರ ನಡುವಿನ ಸಂಘರ್ಷಗಳು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಈ ಹಿಂದೆ ಬೆಂಗಳೂರಿನ ಕೋರಮಂಗಲದ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಇದೇ ರೀತಿ ನಡೆಸಿಕೊಂಡಿದ್ದರಿಂದ, ಆತ ಆತ್ಮಹತ್ಯಗೆ ಯತ್ನಿಸಿದ್ದನ್ನು ನಾವೆಲ್ಲ ಯೋಚಿಸಬೇಕಾಗಿದೆ. ಹೀಗಾಗಿ, ಇಂಥ ಪ್ರಕರಣಗಳು ಅದೆಷ್ಟು ಆಘಾತಕಾರಿ ಎಂಬುವುದನ್ನು ಗಮನದಲ್ಲಿ ಇರಿಸಿಕೊಳ್ಳಬೇಕಾಗಿದೆ’ ಎಂದು ಅವರು ಹೇಳಿದ್ದಾರೆ.