ಉರಿಗೌಡ ಮತ್ತು ನಂಜೇಗೌಡ ವಿಚಾರ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಮುನಿರತ್ನ ಅವರು ಈ ಹೆಸರನ್ನು ನೋಂದಣಿ ಮಾಡಿಸಿ, ಚಲನಚಿತ್ರ ಮಾಡುವುದಾಗಿ ಘೋಷಿಸಿ, ಮುಹೂರ್ತದ ದಿನಾಂಕವನ್ನೂ ನಿಗದಿ ಮಾಡಿದ್ದರು. ಮುನಿರತ್ನ ಅವರ ನಡೆಯನ್ನು ಜೆಡಿಎಸ್ನ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಆಕ್ಷೇಪಿಸಿದ್ದರು.