ಕೋವಿಡ್ ಸಂಕಷ್ಟದಲ್ಲಿ ಜನರು ತೊಂದರೆಗೀಡಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಶ್ರೀ ಮಠವು ಬೆಂಗಳೂರಿನ ಆಯುರ್ವೇದ ಕಾಲೇಜಿನಲ್ಲಿ ಕೋವಿಡ್ ಕೇರ್ ಸೆಂಟರ್, ಬೆಳ್ಳೂರು ಕ್ರಾಸ್ನ ಆದಿಚುಂಚನಗಿರಿ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ, ಚಿಕ್ಕಬಳ್ಳಾಪುರದಲ್ಲಿ ಸೋಂಕಿತರಿಗೆ ಸಾರಿಗೆ ವ್ಯವಸ್ಥೆ ಹಾಗೂ ಔಷಧಿ ಕಿಟ್ ನೀಡುವುದನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಈ ಕಾರ್ಯಗಳ ಮುಂದುವರಿದ ಭಾಗವಾಗಿ, ಅನಾಥ ಮಕ್ಕಳಿಗೆ ನೆರವು ನೀಡುವ ಕೆಲಸವನ್ನೂ ಆರಂಭಿಸಲಾಗಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.