<p><strong>ಬೆಂಗಳೂರು:</strong> ಸಾಮಾಜಿಕ ಜಾಲತಾಣದ ಮೂಲಕ ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿರುವ ಎಲ್ಲರ ವಿರುದ್ಧವೂ ಸೈಬರ್ ಅಪರಾಧ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪುನಃ ಒತ್ತಾಯಿಸಿದ್ದಾರೆ.</p>.<p>ಈ ವಿಚಾರವಾಗಿ ಸರ್ಕಾರಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.</p>.<p>‘ನಾಡಗೀತೆಯನ್ನು ಅವಹೇಳನ ಮಾಡಿದ ವಿಷಯವನ್ನು ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ. ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ನಿರ್ಮಲಾ ನಂದನಾಥ ಸ್ವಾಮೀಜಿ ತಿಳಿಸಿದರು ಎಂದೂ ಮೂಲಗಳು ಹೇಳಿವೆ.</p>.<p><a href="https://www.prajavani.net/karnataka-news/bjp-decided-to-back-karnataka-government-in-revised-text-book-raw-941147.html" itemprop="url">ಪರಿಷ್ಕೃತ ಪಠ್ಯ ಪುಸ್ತಕ ಹಿಂದಕ್ಕೆ ಪಡೆಯುವ ಅಗತ್ಯ ಇಲ್ಲ: ಬಿಜೆಪಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಮಾಜಿಕ ಜಾಲತಾಣದ ಮೂಲಕ ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿರುವ ಎಲ್ಲರ ವಿರುದ್ಧವೂ ಸೈಬರ್ ಅಪರಾಧ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪುನಃ ಒತ್ತಾಯಿಸಿದ್ದಾರೆ.</p>.<p>ಈ ವಿಚಾರವಾಗಿ ಸರ್ಕಾರಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.</p>.<p>‘ನಾಡಗೀತೆಯನ್ನು ಅವಹೇಳನ ಮಾಡಿದ ವಿಷಯವನ್ನು ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ. ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ನಿರ್ಮಲಾ ನಂದನಾಥ ಸ್ವಾಮೀಜಿ ತಿಳಿಸಿದರು ಎಂದೂ ಮೂಲಗಳು ಹೇಳಿವೆ.</p>.<p><a href="https://www.prajavani.net/karnataka-news/bjp-decided-to-back-karnataka-government-in-revised-text-book-raw-941147.html" itemprop="url">ಪರಿಷ್ಕೃತ ಪಠ್ಯ ಪುಸ್ತಕ ಹಿಂದಕ್ಕೆ ಪಡೆಯುವ ಅಗತ್ಯ ಇಲ್ಲ: ಬಿಜೆಪಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>