ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬು ಕೃಷ್ಣಮೂರ್ತಿ, ಪುಟ್ಟು ಕುಲಕರ್ಣಿಗೆ ‘ಆದಿಕವಿ ಪುರಸ್ಕಾರ’

Last Updated 7 ಅಕ್ಟೋಬರ್ 2022, 21:06 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಕೊಡ ಮಾಡುವ 2021 ಹಾಗೂ 2022ನೇ ಸಾಲಿನ ‘ಆದಿಕವಿ ಪುರಸ್ಕಾರ’ಕ್ಕೆ ಕ್ರಮವಾಗಿ ಸಾಹಿತಿ ಬಾಬು ಕೃಷ್ಣಮೂರ್ತಿ ಹಾಗೂ ಚಿಂತಕ ಪುಟ್ಟು ಪರಶುರಾಮ ಕುಲಕರ್ಣಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ಟ ನರೂರು, ‘2021 ಹಾಗೂ 2022ನೇ ಸಾಲಿನ ‘ವಾಗ್ದೇವಿ ಪ್ರಶಸ್ತಿ’ಗೆ ಸಂಸ್ಕೃತ ವಿದ್ವಾಂಸ ವಿಶ್ವನಾಥ ಸುಂಕಸಾಳ ಹಾಗೂ ಬರಹಗಾರ ರೋಹಿತ್ ಚಕ್ರತೀರ್ಥ ಆಯ್ಕೆಯಾಗಿದ್ದಾರೆ. ಈ ಎರಡೂ ಪ್ರಶಸ್ತಿಗಳು ತಲಾ ₹ 1 ಲಕ್ಷ ನಗದು ಒಳಗೊಂಡಿದೆ’ ಎಂದರು

ತುಮಕೂರಿನ ಸಿದ್ಧಗಂಗಾ ಪಿಯು ಕಾಲೇಜಿನಲ್ಲಿ ಇದೇ 16ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT