‘ಯಾವುದೇ ಸಮುದಾಯದ ಮಾಲೀಕತ್ವದ ಪತ್ರಿಕೆಗಳಿಗೆ ಮುದ್ರಣ ಕಾಗದ ದರ, ಮುದ್ರಣ ವೆಚ್ಚ, ಸರಬರಾಜು, ನೌಕರರ ಭತ್ಯೆ ವೆಚ್ಚಗಳು ಒಂದೇ ಆಗಿರುತ್ತವೆ. ಹಾಗಾಗಿ, ಬ್ರಾಹ್ಮಣರ ಮಾಲೀಕತ್ವದ ಪತ್ರಿಕೆಗಳಿಗೂ ಈ ಸವಲತ್ತು ವಿಸ್ತರಿಸಲು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮನವಿ ಮಾಡಿತ್ತು. ನಮ್ಮ ಈ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ. ಸ್ವಾತಂತ್ರ್ಯಾ ನಂತರ ಇದೆ ಮೊದಲ ಬಾರಿ ಇಂತಹ ಅವಕಾಶ ದೊರೆತಿದೆ. ಆದರೆ, ಕೆಲವರು ಈ ಸವಲತ್ತು ಕೇವಲ ಬ್ರಾಹ್ಮಣ ಸಮುದಾಯದ ಒಡೆತನದ ಪತ್ರಿಕೆಗಳಿಗಷ್ಟೇ ಸೀಮಿತ ಎಂಬಂತೆ ಪ್ರಚಾರ ಮಾಡುತ್ತಿದ್ದಾರೆ’ ಎಂದಿದ್ದಾರೆ.