ದಿಢೀರನೆ ಸಭಾಂಗಣಕ್ಕೆ ನುಗ್ಗಿದ ವಕೀಲ ಹಿರೇಮಠ, ಏನು ಮಾಡ್ಕೋತೀರೋ ಮಾಡ್ಕೊಳ್ಳಿ, ನಿಮ್ಮನ್ನು ನೋಡ್ಕೋತೀನಿ ಎಂದು ಅಲ್ಲಿದ್ದ ಶಾಸಕರು ಮತ್ತು ಅಧಿಕಾರಿಗಳನ್ನುದ್ದೇಶಿಸಿ ಬೆದರಿಕೆ ಹಾಕಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಹಿರೇಮಠ ಅವರನ್ನು ಹೊರಕ್ಕೆ ಕರೆತಂದಿದ್ದಾರೆ. ಶಾಸಕರ ಭವನದ ಮೊಗಸಾಲೆಯಲ್ಲೇ ಕುಳಿತು ಕೂಗಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.