ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿ ಇಲ್ಲಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೇಲೆ ಶನಿವಾರ ಬಿಡುಗಡೆಯಾದ ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ, ನೇರವಾಗಿ ಕೆಲ ಸ್ವಾಮೀಜಿಗಳ ಬಳಿ ತೆರಳಿ ಆಶೀರ್ವಾದ ಪಡೆದರು. ಶ್ರೀಗಳು ಹೂಮಾಲೆ ಹಾಕಿ, ಶಾಲು ಹೊದಿಸಿ, ಪುಸ್ತಕ ನೀಡಿ ಸನ್ಮಾನಿಸಿದರು.