ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಅವರನ್ನು ನಿರ್ಗಮಿತ ಸಂಪುಟದ ಸದಸ್ಯರು, ಹಲವು ಶಾಸಕರು ಹಿಂಬಾಲಿಸಿದರು. ಮನೆ ತಲುಪಿದ ಬಳಿಕ ಎದುರಿನ ಮೊಗಸಾಲೆಯಲ್ಲೇ ಕುಳಿತ ಯಡಿಯೂರಪ್ಪ, ಕೆಲಕಾಲ ಎಲ್ಲರೊಂದಿಗೆ ಮಾತುಕತೆ ನಡೆಸಿದರು. ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಚಿವ ಬಸವರಾಜ ಬೊಮ್ಮಾಯಿ, ಆರ್. ಅಶೋಕ ಸೇರಿದಂತೆ ಹಲವು ಸಚಿವರು, ಶಾಸಕರು ಇದ್ದರು.