‘ಪೂರ್ವಾಶ್ರಮದಲ್ಲಿ ಆಗಮ ಇಂದ್ರ ಆಗಿದ್ದ ಅವರು ಅಭಿನವ ಸ್ವಸ್ತಿಶ್ರೀ ಆಗಮ ಕೀರ್ತಿ ಭಟ್ಟಾರಕ ಸ್ವಾಮೀಜಿಯಾಗಿ ಪೀಠಾ
ರೋಹಣ ಮಾಡುವರು. ನಾಲ್ಕು ತಿಂಗಳ ಹಿಂದೆಯೇ ಅವರಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ವಿಚಾರಪಟ್ಟ ಕ್ಷುಲ್ಲಕ ದೀಕ್ಷೆ ನೀಡಿದ್ದು, ಆಗಮ ಕೀರ್ತಿ ಎಂದು ನಾಮಕರಣ ಮಾಡಿದ್ದರು. ತಮ್ಮ ಜೊತೆಗೆ ಇರಿಸಿಕೊಂಡು ಮಠದ ಪರಂಪರೆ, ಸಂಸ್ಕಾರ, ಕ್ಷೇತ್ರದ ಪರಿಚಯ ಮಾಡಿಸಿದ್ದರು’ ಎಂದರು.