ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ನಿರುದ್ಯೋಗ ಪಿಡುಗಿಗೆ ಮುನ್ನುಡಿ ಬರೆದ ಕೇಂದ್ರ ಸರ್ಕಾರ ಈಗ ಅಗ್ನಿಪಥ ಹೆಸರಲ್ಲಿ ಯುವಕರಿಗೆ ಅನ್ಯಾಯವೆಸಗುತ್ತಿದೆ. ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಕಾಂಗ್ರೆಸ್ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸುತ್ತದೆ. ಬಿಜೆಪಿ ಸರ್ಕಾರಕ್ಕೆ ದೇಶದ ಯುವಕರ ಭವಿಷ್ಯದ ಬಗ್ಗೆ ಕಿಂಚಿತ್ತೂ ಚಿಂತೆಯಿಲ್ಲ ಅನ್ನೋದಕ್ಕೆ ಇದೇ ಸಾಕ್ಷಿ’ ಎಂದು ವಾಗ್ದಾಳಿ ನಡೆಸಿದ್ದಾರೆ.