<p><strong>ಬೆಂಗಳೂರು:</strong> ಕೃಷಿ ಡಿಪ್ಲೋಮಾ, ಬಿಎಸ್ಸಿ ಮತ್ತು ತತ್ಸಮಾನ ಪದವಿ ಕೋರ್ಸ್ಗಳ ಪ್ರವೇಶಕ್ಕೆ ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಮೀಸಲಾತಿ ಪ್ರಮಾಣವನ್ನು ಶೇ 40 ರಿಂದ ಶೇ 50 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಈ ಹಿಂದೆ ಮೀಸಲಾತಿ ಶೇ 40 ಇತ್ತು. ಆ ಪ್ರಮಾಣವನ್ನು ಶೇ 50 ರಷ್ಟು ಹೆಚ್ಚಿಸಲು ಬಜೆಟ್ನಲ್ಲಿ ಘೋಷಿಸಲಾಗಿತ್ತು ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>2021–22 ನೇ ಸಾಲಿಗೆ ಸರ್ಕಾರಿ ಶಾಲ ಮಕ್ಕಳ ಸಮವಸ್ತ್ರ ಖರೀದಿಗೆ ₹83.62 ಕೋಟಿ ನೀಡಲು ತೀರ್ಮಾನಿಸಲಾಗಿದ್ದು, ಕೈಮಗ್ಗ ನಿಗಮದಿಂದ ಖರೀದಿಸಲಾಗುವುದು. ಅಲ್ಲದೆ, ರಾಜ್ಯದ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್, ಇತ್ಯಾದಿಗಳ ಖರೀದಿಗೆ ₹83 ಕೋಟಿ ಮಂಜೂರು ಮಾಡಲು ತೀರ್ಮಾನ ತೆಗೆದುಕೊಳ್ಳಲಾಯಿತು ಎಂದರು.</p>.<p>ರಾಜ್ಯದ ಹೊಸ ಜಲನೀತಿ ಕರಡು ರೂಪಿಸಿ, ಪ್ರಾಧಿಕಾರ ರಚಿಸುವ ಉದ್ದೇಶದಿಂದ ಸೂಕ್ತ ನಿರ್ಣಯ ತೆಗೆದುಕೊಳ್ಳಲು ಸಂಪುಟ ಉಪಸಮಿತಿ ರಚಿಸಲು ನಿರ್ಧರಿಸಲಾಗಿದೆ.</p>.<p><strong>ಇತರ ಪ್ರಮುಖ ನಿರ್ಧಾರಗಳು:</strong></p>.<p>*ಹಾಸನದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಎರಡು ಹಂತಗಳಲ್ಲಿ ₹193.65 ಕೋಟಿ ನೀಡಲು ಒಪ್ಪಿಗೆ. ರನ್ವೇ, ಟರ್ಮಿನಲ್, ತಾಂತ್ರಿಕ ಕಟ್ಟಡ ಇತ್ಯಾದಿಗಳು ಇರಲಿವೆ.</p>.<p>*ಕರ್ನಾಟಕ ನಾಗರಿಕ ಸೇವೆಗಳು (ನಿರ್ವಹಣಾ ವರದಿ) ತಿದ್ದುಪಡಿ ನಿಯಮ 2021. ಈ ಹಿಂದೆ ಗೋಪ್ಯ ವರದಿಯನ್ನು ಕೈ ಬರಹದ ಮೂಲಕ ನೀಡಲಾಗುತ್ತಿತ್ತು. ಇನ್ನು ಮುಂದೆ ಡಿಜಿಟಲ್ ರೂಪದಲ್ಲಿ ನೀಡಲು ಈ ತಿದ್ದುಪಡಿ ತರಲಾಗಿದೆ.</p>.<p>* ಬೆಳಗಾವಿ ತಾಲ್ಲೂಕು ಹಿರೇಬಾಗೇವಾಡಿಯಲ್ಲಿ ₹110 ಕೋಟಿ ವೆಚ್ಚದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ</p>.<p>* ಕರ್ನಾಟಕ ತುರ್ತುನಿಧಿ ₹500 ಕೋಟಿಯಿಂದ ₹2500 ಕೋಟಿಗೆ ಹೆಚ್ಚಿಸಲು ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಕೋವಿಡ್ ಕಾರಣ ಮುಂದಿನ ದಿನಗಳಲ್ಲಿ ಖರ್ಚು ಮಾಡಲು ಇಷ್ಟು ಮೊತ್ತ ಬಳಕೆ ಮಾಡಲಾಗುವುದು.</p>.<p>* ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೇಂದ್ರೀಯ ಗ್ರಂಥಾಲಯ ಮತ್ತು ಪರೀಕ್ಷಾ ಹಾಲ್ ನಿರ್ಮಾಣಕ್ಕೆ ₹10.27 ಕೋಟಿ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ</p>.<p>*ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವ್ಯಾಪ್ತಿಗೆ ಒಳಪಡಿವ ಪಿಕೆಟಿಬಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ₹154.44 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ</p>.<p>*ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ಕರ್ನಾಟಕ ನರ್ಸಿಂಗ್ ಕೌನ್ಸಿಲ್, ನರ್ಸಿಂಗ್ ಪರೀಕ್ಷಾ ಮಂಡಳಿ ಮತ್ತು ಅರೆ ವೈದ್ಯಕೀಯ ಮಂಡಳಿಗಳ ಕಚೇರಿ ಸಮುಚ್ಚಯ ಕಟ್ಟಡ ನಿರ್ಮಾಣಕ್ಕೆ ₹75 ಕೋಟಿ ಆಡಳಿತಾತ್ಮಕ ಅನುಮೋದನೆ</p>.<p>* ಹಾಸನದಲ್ಲಿ ₹196.35 ಕೋಟಿ ವೆಚ್ಚದಲ್ಲಿ ಗ್ರೀನ್ಫೀಲ್ಡ್ ದೇಶಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಆರಂಭಿಸಲು ಒಪ್ಪಿಗೆ</p>.<p>*ಉತ್ತರ ಕನ್ನಡ ಜಿಲ್ಲೆಯ ರಾಮನಗುಳಿ ಮತ್ತು ಡೋಗ್ರಿ ಗ್ರಾಮವನ್ನು ಸಂಪರ್ಕಿಸುವ ಗಂಗಾವಳಿ ನದಿಗೆ ₹25 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಅನುಮೋದನೆ</p>.<p>*ಹಾಸನ ಜಿಲ್ಲೆ ಅರಸಿಕೆರೆ ತಾಲ್ಲೂಕು ಗಂಡಸಿ ಮತ್ತು ಬಾಣಾವರದ 530 ವಸತಿ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲು₹ 307.17 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಪೂರೈಕೆ ಯೋಜನೆಗೆ ಒಪ್ಪಿಗೆ</p>.<p>* ಮೈಸೂರಿನಲ್ಲಿ ಮುಡಾ ಅಭಿವೃದ್ಧಿಪಡಿಸಿರುವ ಬಡಾವಣೆಗಳನ್ನು ಸಂಬಂಧಿಸಿ ಸ್ಥಳೀಯ ಆಡಳಿತಗಳಿಗೆ ಒಪ್ಪಿಸುವುದಕ್ಕೆ ಮುನ್ನ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸಲು ₹377.60 ಕೋಟಿ ಆಡಳಿತಾತ್ಮಕ ಅನುಮೋದನೆ</p>.<p>* ಭೂ ಅನುಮೋದನೆ 22 ಎ ಅಡಿ ಇನ್ನು ಮುಂದೆ ಖರಾಬು ಜಮೀನುಗಳಲ್ಲಿ ಕೆರೆ, ತೊರೆ, ಹಳ್ಳಗಳ ಸ್ವರೂಪ ನಾಶವಾಗಿ 10 ವರ್ಷಗಳು ಕಳೆದಿದ್ದರೆ, ಇತರ ಬಳಕೆಗೆ ಅವಕಾಶ ನೀಡಬಹುದು. ಇದಕ್ಕೆ ಸರ್ವೇ ವರದಿ ಅಗತ್ಯವಿದೆ. ಈ ಹಿಂದೆ ನಿರ್ಬಂಧವಿರಲಿಲ್ಲ.</p>.<p>* ಅಣೆಕಟ್ಟು ಸುವ್ಯವಸ್ಥೆಗೊಳಿಸುವ (ಡಿಆರ್ಪಿಐ) ಹಂತ 2 ಮತ್ತು 3 ರ ಅಡಿ 58 ಅಣೆಕಟ್ಟುಗಳ ನಿರ್ವಹಣೆಗೆ ವಿಶ್ವಬ್ಯಾಂಕ್ ನೆರವಿನಡಿ ಯೋಜನೆ ಕೈಗೆತ್ತಿಕೊಳ್ಳುವ ₹1500 ಕೋಟಿ ಯೋಜನೆಗೆ ಒಪ್ಪಿಗೆ ಈ ಯೋಜನೆಗೆ ವಿಶ್ವಬ್ಯಾಂಕ್ ಶೇ 70 ಮತ್ತು ರಾಜ್ಯ ಸರ್ಕಾರ ಶೇ 30 ರಷ್ಟು ವೆಚ್ಚ ಭರಿಸಲಿವೆ.</p>.<p>* ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಗೋವಿನಕೋವಿ, ಹನುಸಾಗರದ 94 ಕೆರೆಗಳನ್ನು ತುಂಬಿಸುವ ₹415 ಕೋಟಿ ಅಂದಾಜಿಗೆ ಒಪ್ಪಿಗೆ. ತುಂಗಭದ್ರಾ ನದಿಯಿಂದ ನೀರೆತ್ತಲಾಗುವುದು</p>.<p>*ಬಳ್ಳಾರಿ ಜಿಲ್ಲೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 74 ಕೆರೆಗಳನ್ನು ತುಂಬಿಸುವ ₹670 ಕೋಟಿ ಯೋಜನೆಗೆ ಒಪ್ಪಿಗೆ. ತುಂಗಭದ್ರಾ ನದಿಯಿಂದ ನೀರೆತ್ತಲಾಗುವುದು</p>.<p>*ದಾವಣಗೆರೆ ಜಿಲ್ಲೆಯ ಸಾಸ್ವೆ ಹಳ್ಳಿ ಏತ ನೀರಾವರಿ ವ್ಯಾಪ್ತಿಗೆ ಬರುವ ಕೆರೆಗಳ ಸಂವರ್ಧನೆಗೆ ₹167 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೃಷಿ ಡಿಪ್ಲೋಮಾ, ಬಿಎಸ್ಸಿ ಮತ್ತು ತತ್ಸಮಾನ ಪದವಿ ಕೋರ್ಸ್ಗಳ ಪ್ರವೇಶಕ್ಕೆ ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಮೀಸಲಾತಿ ಪ್ರಮಾಣವನ್ನು ಶೇ 40 ರಿಂದ ಶೇ 50 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಈ ಹಿಂದೆ ಮೀಸಲಾತಿ ಶೇ 40 ಇತ್ತು. ಆ ಪ್ರಮಾಣವನ್ನು ಶೇ 50 ರಷ್ಟು ಹೆಚ್ಚಿಸಲು ಬಜೆಟ್ನಲ್ಲಿ ಘೋಷಿಸಲಾಗಿತ್ತು ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>2021–22 ನೇ ಸಾಲಿಗೆ ಸರ್ಕಾರಿ ಶಾಲ ಮಕ್ಕಳ ಸಮವಸ್ತ್ರ ಖರೀದಿಗೆ ₹83.62 ಕೋಟಿ ನೀಡಲು ತೀರ್ಮಾನಿಸಲಾಗಿದ್ದು, ಕೈಮಗ್ಗ ನಿಗಮದಿಂದ ಖರೀದಿಸಲಾಗುವುದು. ಅಲ್ಲದೆ, ರಾಜ್ಯದ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್, ಇತ್ಯಾದಿಗಳ ಖರೀದಿಗೆ ₹83 ಕೋಟಿ ಮಂಜೂರು ಮಾಡಲು ತೀರ್ಮಾನ ತೆಗೆದುಕೊಳ್ಳಲಾಯಿತು ಎಂದರು.</p>.<p>ರಾಜ್ಯದ ಹೊಸ ಜಲನೀತಿ ಕರಡು ರೂಪಿಸಿ, ಪ್ರಾಧಿಕಾರ ರಚಿಸುವ ಉದ್ದೇಶದಿಂದ ಸೂಕ್ತ ನಿರ್ಣಯ ತೆಗೆದುಕೊಳ್ಳಲು ಸಂಪುಟ ಉಪಸಮಿತಿ ರಚಿಸಲು ನಿರ್ಧರಿಸಲಾಗಿದೆ.</p>.<p><strong>ಇತರ ಪ್ರಮುಖ ನಿರ್ಧಾರಗಳು:</strong></p>.<p>*ಹಾಸನದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಎರಡು ಹಂತಗಳಲ್ಲಿ ₹193.65 ಕೋಟಿ ನೀಡಲು ಒಪ್ಪಿಗೆ. ರನ್ವೇ, ಟರ್ಮಿನಲ್, ತಾಂತ್ರಿಕ ಕಟ್ಟಡ ಇತ್ಯಾದಿಗಳು ಇರಲಿವೆ.</p>.<p>*ಕರ್ನಾಟಕ ನಾಗರಿಕ ಸೇವೆಗಳು (ನಿರ್ವಹಣಾ ವರದಿ) ತಿದ್ದುಪಡಿ ನಿಯಮ 2021. ಈ ಹಿಂದೆ ಗೋಪ್ಯ ವರದಿಯನ್ನು ಕೈ ಬರಹದ ಮೂಲಕ ನೀಡಲಾಗುತ್ತಿತ್ತು. ಇನ್ನು ಮುಂದೆ ಡಿಜಿಟಲ್ ರೂಪದಲ್ಲಿ ನೀಡಲು ಈ ತಿದ್ದುಪಡಿ ತರಲಾಗಿದೆ.</p>.<p>* ಬೆಳಗಾವಿ ತಾಲ್ಲೂಕು ಹಿರೇಬಾಗೇವಾಡಿಯಲ್ಲಿ ₹110 ಕೋಟಿ ವೆಚ್ಚದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ</p>.<p>* ಕರ್ನಾಟಕ ತುರ್ತುನಿಧಿ ₹500 ಕೋಟಿಯಿಂದ ₹2500 ಕೋಟಿಗೆ ಹೆಚ್ಚಿಸಲು ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಕೋವಿಡ್ ಕಾರಣ ಮುಂದಿನ ದಿನಗಳಲ್ಲಿ ಖರ್ಚು ಮಾಡಲು ಇಷ್ಟು ಮೊತ್ತ ಬಳಕೆ ಮಾಡಲಾಗುವುದು.</p>.<p>* ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೇಂದ್ರೀಯ ಗ್ರಂಥಾಲಯ ಮತ್ತು ಪರೀಕ್ಷಾ ಹಾಲ್ ನಿರ್ಮಾಣಕ್ಕೆ ₹10.27 ಕೋಟಿ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ</p>.<p>*ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವ್ಯಾಪ್ತಿಗೆ ಒಳಪಡಿವ ಪಿಕೆಟಿಬಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ₹154.44 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ</p>.<p>*ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ಕರ್ನಾಟಕ ನರ್ಸಿಂಗ್ ಕೌನ್ಸಿಲ್, ನರ್ಸಿಂಗ್ ಪರೀಕ್ಷಾ ಮಂಡಳಿ ಮತ್ತು ಅರೆ ವೈದ್ಯಕೀಯ ಮಂಡಳಿಗಳ ಕಚೇರಿ ಸಮುಚ್ಚಯ ಕಟ್ಟಡ ನಿರ್ಮಾಣಕ್ಕೆ ₹75 ಕೋಟಿ ಆಡಳಿತಾತ್ಮಕ ಅನುಮೋದನೆ</p>.<p>* ಹಾಸನದಲ್ಲಿ ₹196.35 ಕೋಟಿ ವೆಚ್ಚದಲ್ಲಿ ಗ್ರೀನ್ಫೀಲ್ಡ್ ದೇಶಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಆರಂಭಿಸಲು ಒಪ್ಪಿಗೆ</p>.<p>*ಉತ್ತರ ಕನ್ನಡ ಜಿಲ್ಲೆಯ ರಾಮನಗುಳಿ ಮತ್ತು ಡೋಗ್ರಿ ಗ್ರಾಮವನ್ನು ಸಂಪರ್ಕಿಸುವ ಗಂಗಾವಳಿ ನದಿಗೆ ₹25 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಅನುಮೋದನೆ</p>.<p>*ಹಾಸನ ಜಿಲ್ಲೆ ಅರಸಿಕೆರೆ ತಾಲ್ಲೂಕು ಗಂಡಸಿ ಮತ್ತು ಬಾಣಾವರದ 530 ವಸತಿ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲು₹ 307.17 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಪೂರೈಕೆ ಯೋಜನೆಗೆ ಒಪ್ಪಿಗೆ</p>.<p>* ಮೈಸೂರಿನಲ್ಲಿ ಮುಡಾ ಅಭಿವೃದ್ಧಿಪಡಿಸಿರುವ ಬಡಾವಣೆಗಳನ್ನು ಸಂಬಂಧಿಸಿ ಸ್ಥಳೀಯ ಆಡಳಿತಗಳಿಗೆ ಒಪ್ಪಿಸುವುದಕ್ಕೆ ಮುನ್ನ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸಲು ₹377.60 ಕೋಟಿ ಆಡಳಿತಾತ್ಮಕ ಅನುಮೋದನೆ</p>.<p>* ಭೂ ಅನುಮೋದನೆ 22 ಎ ಅಡಿ ಇನ್ನು ಮುಂದೆ ಖರಾಬು ಜಮೀನುಗಳಲ್ಲಿ ಕೆರೆ, ತೊರೆ, ಹಳ್ಳಗಳ ಸ್ವರೂಪ ನಾಶವಾಗಿ 10 ವರ್ಷಗಳು ಕಳೆದಿದ್ದರೆ, ಇತರ ಬಳಕೆಗೆ ಅವಕಾಶ ನೀಡಬಹುದು. ಇದಕ್ಕೆ ಸರ್ವೇ ವರದಿ ಅಗತ್ಯವಿದೆ. ಈ ಹಿಂದೆ ನಿರ್ಬಂಧವಿರಲಿಲ್ಲ.</p>.<p>* ಅಣೆಕಟ್ಟು ಸುವ್ಯವಸ್ಥೆಗೊಳಿಸುವ (ಡಿಆರ್ಪಿಐ) ಹಂತ 2 ಮತ್ತು 3 ರ ಅಡಿ 58 ಅಣೆಕಟ್ಟುಗಳ ನಿರ್ವಹಣೆಗೆ ವಿಶ್ವಬ್ಯಾಂಕ್ ನೆರವಿನಡಿ ಯೋಜನೆ ಕೈಗೆತ್ತಿಕೊಳ್ಳುವ ₹1500 ಕೋಟಿ ಯೋಜನೆಗೆ ಒಪ್ಪಿಗೆ ಈ ಯೋಜನೆಗೆ ವಿಶ್ವಬ್ಯಾಂಕ್ ಶೇ 70 ಮತ್ತು ರಾಜ್ಯ ಸರ್ಕಾರ ಶೇ 30 ರಷ್ಟು ವೆಚ್ಚ ಭರಿಸಲಿವೆ.</p>.<p>* ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಗೋವಿನಕೋವಿ, ಹನುಸಾಗರದ 94 ಕೆರೆಗಳನ್ನು ತುಂಬಿಸುವ ₹415 ಕೋಟಿ ಅಂದಾಜಿಗೆ ಒಪ್ಪಿಗೆ. ತುಂಗಭದ್ರಾ ನದಿಯಿಂದ ನೀರೆತ್ತಲಾಗುವುದು</p>.<p>*ಬಳ್ಳಾರಿ ಜಿಲ್ಲೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 74 ಕೆರೆಗಳನ್ನು ತುಂಬಿಸುವ ₹670 ಕೋಟಿ ಯೋಜನೆಗೆ ಒಪ್ಪಿಗೆ. ತುಂಗಭದ್ರಾ ನದಿಯಿಂದ ನೀರೆತ್ತಲಾಗುವುದು</p>.<p>*ದಾವಣಗೆರೆ ಜಿಲ್ಲೆಯ ಸಾಸ್ವೆ ಹಳ್ಳಿ ಏತ ನೀರಾವರಿ ವ್ಯಾಪ್ತಿಗೆ ಬರುವ ಕೆರೆಗಳ ಸಂವರ್ಧನೆಗೆ ₹167 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>