‘ರೈತರು ಬೆಳೆದ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗಬೇಕು ಹಾಗೂ ಈ ಭಾಗದ ಜನರ ಕೈಗೆ ಕೆಲಸ
ಸಿಗಬೇಕು ಎಂದು ನೀರಾವರಿ ಹಾಗೂ ಕೈಗಾರಿಕೆಗೆ ಒತ್ತು ಕೊಟ್ಟಿದ್ದೇವೆ. ಮುಂಬೈ–ಚೆನ್ನೈ ಕೈಗಾರಿಕಾ ಕಾರಿಡಾರ್ ಯೋಜನೆ ಮೂಲಕ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಮಧ್ಯ ಕರ್ನಾಟಕಕ್ಕೆ ಭವ್ಯ ಭವಿಷ್ಯ ಕಲ್ಪಿಸಿಕೊತ್ತೇವೆ’ ಎಂದು ಮುಖ್ಯಮಂತ್ರಿ ಹೇಳಿದರು.