ಶನಿವಾರ ಕೇದಾರೋತ್ಥಾನ ಟ್ರಸ್ಟ್ನಿಂದ ಕಡೆಕಾರಿನಲ್ಲಿ ನಡೆದ ಹಡಿಲು ಭೂಮಿ ಕೃಷಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ‘ರಾಜ್ಯಕ್ಕೆ ಮಾದರಿ ಹಾಗೂ ಮಾರ್ಗದರ್ಶನ ಮಾಡುವ ಕೆಲಸವನ್ನು ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್ ಮಾಡುತ್ತಿದೆ. ಜಿಲ್ಲೆಯಲ್ಲಿ ಹಡಿಲು ಬಿದ್ದಿದ್ದ 2,000 ಎಕರೆಯಲ್ಲಿ ಸಾವಯವ ಪದ್ಧತಿಯಲ್ಲಿ ಭತ್ತದ ನಾಟಿ ನಡೆಯುತ್ತಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಟ್ರಸ್ಟ್ ಮಾಡುತ್ತಿರುವುದು ಅಭಿನಂದನೀಯ’ ಎಂದರು.