ಈ ಬಾರಿ ಉತ್ತಮ ಮಳೆಯಾಗಿದ್ದು, ಅಲ್ಲದೇ ಕೋವಿಡ್ನಿಂದಾಗಿ ಗ್ರಾಮೀಣ ಭಾಗದಲ್ಲಿ ಕೃಷಿಯೆಡೆಗೆ ರೈತಾಪಿವರ್ಗದ ಜೊತೆಗೆ ಯುವಜನತೆ ಕೃಷಿಗೆ ಹೆಚ್ಚು ಒತ್ತು ನೀಡಿರುವುದರಿಂದ ಈ ಬಾರಿ ಬಿತ್ತನೆಯೂ ಹೆಚ್ಚಾಗಿದೆ. ಆದ್ದರಿಂದ ಕೃಷಿಗೆ ಅಗತ್ಯವಾದ ರಸಗೊಬ್ಬರ ಹೆಚ್ಚಿನದಾಗಿ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆಯಾಗಲೀ ಯೂರಿಯಾದ ಕೊರತೆಯಾಗಲೀ ಆಗದಂತೆ ಕೃಷಿ ಸಚಿವರು ದಿಟ್ಟ ಹೆಜ್ಜೆಯಿಟ್ಟಿರುವ ಬಗ್ಗೆ ಕೇಂದ್ರದದ ಸಚಿವರೊಂದಿಗೆ ಚರ್ಚಿಸಿದರು. ಹಾಗೂ ನಕಲಿ ಬೀಜ ತಡೆ, ನಕಲಿ ರಾಸಾಯನಿಕ ಗೊಬ್ಬರ ಜಾಲವನ್ನು ಬೇಧಿಸುವಲ್ಲಿ ಕೃಷಿ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದರು.