ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ವಿರುದ್ಧ ದೂರು ನೀಡಿರುವ ಈಶ್ವರಪ್ಪ ನಡೆಗೆ ಸಚಿವ ಬಿ.ಸಿ.ಪಾಟೀಲ ಬೇಸರ

Last Updated 1 ಏಪ್ರಿಲ್ 2021, 10:40 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ನಡೆಯ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಬೇಸರ ವ್ಯಕ್ತಪಡಿಸಿದ್ದಾರೆ.

ಈಶ್ವರಪ್ಪನವರು ಮುಖ್ಯಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಮತ್ತು ಹಣವನ್ನು ಮಂಜೂರು ಮಾಡಿರುವ ಬಗ್ಗೆ ನೇರವಾಗಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ ಎಂದಿದ್ದಾರೆ.

ಯಾವುದೇ ಸಮಸ್ಯೆ ಇದ್ದರೂ ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲು ಅವಕಾಶವಿದೆ. ಹೀಗಿದ್ದರೂ ಸಂಪುಟ ಸಭೆಯಲ್ಲಿ ಯಾವುದೇ ವಿಷಯವನ್ನು ಈಶ್ವರಪ್ಪನವರು ಪ್ರಸ್ತಾಪ ಮಾಡದೆ ಈ ರೀತಿ ನೇರವಾಗಿ ಏಕಾಏಕಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದು ಅವರಿಗೆ ಶೋಭೆ ತರುವಂತಹದ್ದಲ್ಲ.

ಯಾವುದೇ ತಪ್ಪನ್ನು ಮಾಡದ ಬಿ.ಎಸ್.ಯಡಿಯೂರಪ್ಪ ಅವರು ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ಎಷ್ಟು ಸರಿ? ಎಂದು ಬಿ.ಸಿ.ಪಾಟೀಲ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT