ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಯವರ ನಿರ್ದೇಶನದಂತೆ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ರಮೇಶ್ ಅವರನ್ನು ನೇಮಿಸಿ ದ್ದಾರೆ. 31 ವರ್ಷಗಳಿಂದ ಕೆಪಿಸಿಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಮೇಶ್, ಪಕ್ಷದ ಕಾರ್ಮಿಕ ಘಟಕದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿ ಪಕ್ಷ ಸಂಘಟನೆಗಾಗಿ ಶ್ರಮಿಸಿದ್ದಾರೆ. ಪಕ್ಷದಲ್ಲಿನ ಅವರ ಸೇವೆ ಪರಿಗಣಿಸಿ ಪ್ರಾದೇಶಿಕ ಸಂಯೋಜಕರಾಗಿ ನೇಮಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.