‘ರಾಜಕೀಯ ಉದ್ದೇಶಕ್ಕಾಗಿ ರಾಜ್ಯದಲ್ಲಿ ಶೈಕ್ಷಣಿಕ ವಾತಾವರಣ ಹಾಳು ಮಾಡಲು ಮುಂದಾಗಿರುವುದು ಸರಿಯಲ್ಲ. ಪ್ರಾಚೀನ ಶಿಕ್ಷಣ ವ್ಯವಸ್ಥೆಯು ದೇಶದ ಬಡವರು, ದಲಿತರು, ಶೋಷಿತರು ಮತ್ತು ಮಹಿಳೆಯರನ್ನು ಒಳಗೊಂಡ ಬಹುಸಂಖ್ಯಾತ ಜನರನ್ನು ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತವಾಗಿಸಿತ್ತು. ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಈಶ್ವರಚಂದ್ರ ವಿದ್ಯಾಸಾಗರ ಅವರಂತಹ ಮಹಾನ್ ವ್ಯಕ್ತಿಗಳು ಇದರ ವಿರುದ್ಧ ಹೋರಾಡಿದ್ದರು. ಸರ್ವರಿಗೂ ಶಿಕ್ಷಣ ದೊರೆಯಬೇಕೆಂಬ ಆಶಯ ಪ್ರತಿಪಾದಿಸಿದ್ದರು. ರಾಜ್ಯ ಸರ್ಕಾರ ಅವರಿಗೆ ಅವಮಾನ ಮಾಡಲು ಹೊರಟಿದೆ’ ಎಂದು ದೂರಿದ್ದಾರೆ.