‘ಪರೀಕ್ಷೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಕಾರ್ಯಕ್ರಮ ಆರಂಭಿಸಿದ್ದೇವೆ. ಎಐಡಿಎಸ್ಒ ಕರ್ನಾಟಕದ ಫೇಸ್ಬುಕ್ ಪುಟ ಹಾಗೂ ಯೂಟ್ಯೂಬ್ ವಾಹಿನಿಯಲ್ಲಿ ಉಪನ್ಯಾಸ ಮಾಲಿಕೆ ನೇರ ಪ್ರಸಾರಗೊಳ್ಳಲಿದೆ. ಅನೇಕ ವಿಡಿಯೊಗಳನ್ನೂ ಹಾಕಲಿದ್ದೇವೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.