<p><strong>ಬೆಂಗಳೂರು: </strong>ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಹೊಣೆಯನ್ನು ಅದಾನಿ ಎಂಟರ್ ಪ್ರೈಸಸ್ಗೆ ಹಸ್ತಾಂತರ ನಿರ್ಣಯ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ವಿಮಾನ ನಿಲ್ದಾಣ ಪ್ರಾಧಿಕಾರ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪುನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ಪ್ರಕಟಿಸಿತು.</p>.<p>ಕೇರಳದ ತಿರುವನಂತಪುರ ವಿಮಾನ ನಿಲ್ದಾಣ ನಿರ್ವಹಣೆ ಹೊಣೆಯನ್ನು ಖಾಸಗಿ ಕಂಪನಿಗೆ ವಹಿಸಲಾಗಿದೆ. ಆ ನಿರ್ಣಯವನ್ನು ಅಲ್ಲಿನ ಹೈಕೋರ್ಟ್ ಎತ್ತಿ ಹಿಡಿದಿದೆ. ಕೇಂದ್ರದ ನಿರ್ಧಾರದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ತಿಳಿಸಿದ ಪೀಠ, ಅರ್ಜಿ ವಜಾಗೊಳಿಸಿತು.</p>.<p>ಮಂಗಳೂರು ವಿಮಾನ ನಿಲ್ದಾಣ ಕಾರ್ಯಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿಯನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಿಸಲು ಕೇಂದ್ರ ಸಚಿವ ಸಂಪುಟ 2018ರಲ್ಲಿ ನಿರ್ಣಯ ಕೈಗೊಂಡಿತ್ತು. ಅದನ್ನು ಆಧರಿಸಿ ಬಿಡ್ಡಿಂಗ್ ಪ್ರಕ್ರಿಯೆ ನಡೆಸಲಾಗಿತ್ತು. ಬಿಡ್ಡಿಂಗ್ನಲ್ಲಿ ಭಾಗವಹಿಸಿದ್ದ ಅದಾನಿ ಎಂಟರ್ ಪ್ರೈಸಸ್ ನಿರ್ವಹಣೆ ಗುತ್ತಿಗೆ ಪಡೆದುಕೊಂಡಿದೆ.</p>.<p>ಇದರಿಂದ ಬರುವ ಆದಾಯ ಎಷ್ಟು ಎಂಬುದನ್ನು ಹೇಳಿಲ್ಲ. ಏಕ ಪಕ್ಷೀಯ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಣಯ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.</p>.<p>‘ಇದು ಕೇಂದ್ರ ಸರ್ಕಾರದ ನೀತಿ–ನಿರೂಪಣೆಗೆ ಸಂಬಂಧಿಸಿದ ವಿಷಯ. ಎಲ್ಲಾ ರೀತಿಯ ವಿಚಾರಗಳನ್ನು ಪರಿಶೀಲಿಸಿಯೇ ನಿರ್ಣಯ ಕೈಗೊಳ್ಳಲಾಗಿದೆ. ಈ ಹಂತದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶ ಮಾಡಬಾರದು’ ಎಂದು ಕೇಂದ್ರ ಸರ್ಕಾರದ ಪರ ವಕೀಲರು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಹೊಣೆಯನ್ನು ಅದಾನಿ ಎಂಟರ್ ಪ್ರೈಸಸ್ಗೆ ಹಸ್ತಾಂತರ ನಿರ್ಣಯ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ವಿಮಾನ ನಿಲ್ದಾಣ ಪ್ರಾಧಿಕಾರ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪುನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ಪ್ರಕಟಿಸಿತು.</p>.<p>ಕೇರಳದ ತಿರುವನಂತಪುರ ವಿಮಾನ ನಿಲ್ದಾಣ ನಿರ್ವಹಣೆ ಹೊಣೆಯನ್ನು ಖಾಸಗಿ ಕಂಪನಿಗೆ ವಹಿಸಲಾಗಿದೆ. ಆ ನಿರ್ಣಯವನ್ನು ಅಲ್ಲಿನ ಹೈಕೋರ್ಟ್ ಎತ್ತಿ ಹಿಡಿದಿದೆ. ಕೇಂದ್ರದ ನಿರ್ಧಾರದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ತಿಳಿಸಿದ ಪೀಠ, ಅರ್ಜಿ ವಜಾಗೊಳಿಸಿತು.</p>.<p>ಮಂಗಳೂರು ವಿಮಾನ ನಿಲ್ದಾಣ ಕಾರ್ಯಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿಯನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಿಸಲು ಕೇಂದ್ರ ಸಚಿವ ಸಂಪುಟ 2018ರಲ್ಲಿ ನಿರ್ಣಯ ಕೈಗೊಂಡಿತ್ತು. ಅದನ್ನು ಆಧರಿಸಿ ಬಿಡ್ಡಿಂಗ್ ಪ್ರಕ್ರಿಯೆ ನಡೆಸಲಾಗಿತ್ತು. ಬಿಡ್ಡಿಂಗ್ನಲ್ಲಿ ಭಾಗವಹಿಸಿದ್ದ ಅದಾನಿ ಎಂಟರ್ ಪ್ರೈಸಸ್ ನಿರ್ವಹಣೆ ಗುತ್ತಿಗೆ ಪಡೆದುಕೊಂಡಿದೆ.</p>.<p>ಇದರಿಂದ ಬರುವ ಆದಾಯ ಎಷ್ಟು ಎಂಬುದನ್ನು ಹೇಳಿಲ್ಲ. ಏಕ ಪಕ್ಷೀಯ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಣಯ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.</p>.<p>‘ಇದು ಕೇಂದ್ರ ಸರ್ಕಾರದ ನೀತಿ–ನಿರೂಪಣೆಗೆ ಸಂಬಂಧಿಸಿದ ವಿಷಯ. ಎಲ್ಲಾ ರೀತಿಯ ವಿಚಾರಗಳನ್ನು ಪರಿಶೀಲಿಸಿಯೇ ನಿರ್ಣಯ ಕೈಗೊಳ್ಳಲಾಗಿದೆ. ಈ ಹಂತದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶ ಮಾಡಬಾರದು’ ಎಂದು ಕೇಂದ್ರ ಸರ್ಕಾರದ ಪರ ವಕೀಲರು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>