2020–21ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿ, ಇನ್ನೂ ಅನುಷ್ಠಾನಗೊಳ್ಳದ ಯೋಜನೆಗಳನ್ನು ಪಟ್ಟಿ ಮಾಡಿದ ಅವರು, ‘ಸರ್ಕಾರ ಆ ಯೋಜನೆಗಳ ಅನುಷ್ಠಾನಕ್ಕೆ ಮೊದಲು ಆದ್ಯತೆ ನೀಡಬೇಕು. ಅಲ್ಲದೆ, ಪ್ರಸಕ್ತ ಸಾಲಿನಲ್ಲಿ ಘೋಷಿಸಿದ ಹಲವು ಯೋಜನೆಗಳಿಗೆ ಅನುದಾನ ಕಡಿಮೆ ಹಂಚಿಕೆ ಮಾಡಲಾಗಿದೆ. ಆ ಬಗ್ಗೆಯೂ ಗಮನಹರಿಸಬೇಕು. ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಜಾರಿಗೆ ಬಂದಿರುವುದರಿಂದ ಗೋಶಾಲೆಗಳ ಸಂಖ್ಯೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.