ಮೈಸೂರು: ‘ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು (ಕೆಆರ್ವಿಪಿ) ನಗರದಲ್ಲಿ ಸೆ.8ರಿಂದ 10ರವರೆಗೆ 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನ ಆಯೋಜಿಸಲಿದೆ’ ಎಂದು ಪರಿಷತ್ತಿನ ಸಂಯೋಜಕ ಎ.ಎನ್.ಮಹೇಶ್ ತಿಳಿಸಿದರು.
‘ಖ್ಯಾತ ವಿಜ್ಞಾನಿ ಎ.ಎಸ್.ಕಿರಣ್ಕುಮಾರ್ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ’ ಎಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾಹಿತಿ ನೀಡಿದರು.