<p><strong>ಬೆಂಗಳೂರು: </strong>2022ರ ಆಗಸ್ಟ್ ತಿಂಗಳಲ್ಲಿ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಐದು ಮಿನಿ ಸಮಾವೇಶಗಳನ್ನು ಅಮೆರಿಕದ ನಾನಾ ಕಡೆಗಳಲ್ಲಿ ನಡೆಸಲಾಗುವುದು. ಆ ದೇಶದಲ್ಲಿರುವ ಕನ್ನಡಿಗರು ತಮ್ಮ ವಾಣಿಜ್ಯ ವೇದಿಕೆಗಳ ಮೂಲಕ ಕರ್ನಾಟಕದಲ್ಲಿ ಹೆಚ್ಚು ಬಂಡವಾಳ ಹೂಡಿಕೆಗೆ ಮುಂದಡಿ ಇಡಬೇಕು ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.</p>.<p>ಉತ್ತರ ಅಮೆರಿಕದಲ್ಲಿರುವ ಕನ್ನಡ ಕೂಟಗಳ ಆಗರವಾಗಿರುವ `ಅಕ್ಕ’ ಸಂಘಟನೆಯು ಶನಿವಾರ ಆಚರಿಸಿದ 66ನೇ ಕನ್ನಡ ರಾಜ್ಯೋತ್ಸವವನ್ನು ಉದ್ದೇಶಿಸಿ ವರ್ಚುಯಲ್ ಆಗಿ ಮಾತನಾಡಿದ ಸಚಿವರು, `ಅಮೆರಿಕದಲ್ಲಿರುವ ಕನ್ನಡಿಗರು ಮತ್ತು ಭಾರತೀಯರು ಅಲ್ಲಿ ಪ್ರಬಲ ರಾಜಕೀಯ ಶಕ್ತಿ ಹೊಂದಿರುವ ಯಹೂದಿಗಳಿಗಿಂತ ಹೆಚ್ಚು ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಸಂಗತಿಯಾಗಿದೆ’ ಎಂದರು.</p>.<p>ಅಮೆರಿಕದಲ್ಲಿರುವ ಕನ್ನಡಿಗರು ರಾಜ್ಯ ಸರಕಾರ ಮತ್ತು ಆ ದೇಶಗಳ ನಡುವೆ ಕೊಂಡಿಯಂತೆ ಕೆಲಸ ಮಾಡುತ್ತಿರುವುದು ಗಮನಾರ್ಹವಾಗಿದೆ. ಈಗ ಅಮೆರಿಕದ ಕಂಪನಿಗಳಿಗೆ ಬೆಂಗಳೂರಿನಿಂದ ನುರಿತ ಮಾನವ ಸಂಪನ್ಮೂಲವನ್ನು ಒದಗಿಸಲು ಕರ್ನಾಟಕ ಸರಕಾರವು `ಸಿಲಿಕಾನ್ ವ್ಯಾಲಿ ಬ್ರಿಡ್ಜ್’ ಎನ್ನುವ ಹೊಸ ಉಪಕ್ರಮವನ್ನು ಆರಂಭಿಸಿದೆ ಎಂದು ಅವರು ನುಡಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/bts-2021-we-are-in-talks-of-launching-a-silicon-valley-talent-bridge-says-cn-ashwath-narayan-885259.html" itemprop="url">ಬೆಂಗಳೂರಿನಲ್ಲಿ ಸ್ಟಾರ್ಟಪ್ ಸಿಲಿಕ್ಯಾನ್ ವ್ಯಾಲಿ ಬ್ರಿಡ್ಜ್ ರಚನೆ: ಅಶ್ವತ್ಥನಾರಾಯಣ </a></p>.<p>ಕನ್ನಡಿಗರು ಕರ್ನಾಟಕಕ್ಕೆ ಸೀಮಿತವಾಗದೆ ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ, ವೈದ್ಯಕೀಯ ರಂಗಗಳಲ್ಲಿ ಛಾಪು ಮೂಡಿಸಿರುವುದು ಅನುಕರಣೀಯ ನಡೆಯಾಗಿದೆ. ಈಗಿನ ವರ್ಚುಯಲ್ ಮತ್ತು ಹೈಬ್ರಿಡ್ ಜಗತ್ತಿನಲ್ಲಿ ಅಮೆರಿಕದ ಕನ್ನಡಿಗರು ನಮಗೆ ಇನ್ನಷ್ಟು ಹತ್ತಿರವಾಗಿದ್ದಾರೆ ಎಂದು ಸಚಿವರು ಬಣ್ಣಿಸಿದರು.</p>.<p>ಎನ್ಇಪಿ ಮತ್ತು ಇನ್ನಿತರ ಉಪಕ್ರಮಗಳ ಮೂಲಕ ಹೊರನಾಡಿನಿಂದ ಬರುವ ವಿದ್ಯಾರ್ಥಿಗಳನ್ನು ಕನ್ನಡ ಕಲಿಯಲು ಪ್ರೋತ್ಸಾಹಿಸಲಾಗುತ್ತಿದೆ. ಇದಕ್ಕಾಗಿ ಆರು ತಿಂಗಳು ಮಾತ್ರ ಓದುವಂತಹ ಪಠ್ಯವನ್ನು ಅಳವಡಿಸಲಾಗಿದೆ. ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಸಂಕಲ್ಪಬಲದ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವರು ಹೇಳಿದರು.</p>.<p>ಅಮೆರಿಕದಲ್ಲಿರುವ ಕನ್ನಡಿಗರು ಸಾವಿರಾರು ಮೈಲಿ ಆಚೆ ಇದ್ದರೂ ತಮ್ಮ ಕರುಳಿನ ಭಾಷೆಯನ್ನು ಮರೆಯದೆ, ಅರ್ಥಪೂರ್ಣವಾಗಿ ಬೆಳೆಸುತ್ತಿದ್ದಾರೆ. ಇದು ಅನುಸರಣೀಯ ಮಾದರಿಯಾಗಿದೆ. ಇದರಿಂದ ಕನ್ನಡವು ಮತ್ತಷ್ಟು ಶಕ್ತಿಶಾಲಿಯಾಗಿ ಬೆಳೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್, ಅಕ್ಕ ಸಂಘಟನೆಯ ಅಧ್ಯಕ್ಷ ತುಮಕೂರು ದಯಾನಂದ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>2022ರ ಆಗಸ್ಟ್ ತಿಂಗಳಲ್ಲಿ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಐದು ಮಿನಿ ಸಮಾವೇಶಗಳನ್ನು ಅಮೆರಿಕದ ನಾನಾ ಕಡೆಗಳಲ್ಲಿ ನಡೆಸಲಾಗುವುದು. ಆ ದೇಶದಲ್ಲಿರುವ ಕನ್ನಡಿಗರು ತಮ್ಮ ವಾಣಿಜ್ಯ ವೇದಿಕೆಗಳ ಮೂಲಕ ಕರ್ನಾಟಕದಲ್ಲಿ ಹೆಚ್ಚು ಬಂಡವಾಳ ಹೂಡಿಕೆಗೆ ಮುಂದಡಿ ಇಡಬೇಕು ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.</p>.<p>ಉತ್ತರ ಅಮೆರಿಕದಲ್ಲಿರುವ ಕನ್ನಡ ಕೂಟಗಳ ಆಗರವಾಗಿರುವ `ಅಕ್ಕ’ ಸಂಘಟನೆಯು ಶನಿವಾರ ಆಚರಿಸಿದ 66ನೇ ಕನ್ನಡ ರಾಜ್ಯೋತ್ಸವವನ್ನು ಉದ್ದೇಶಿಸಿ ವರ್ಚುಯಲ್ ಆಗಿ ಮಾತನಾಡಿದ ಸಚಿವರು, `ಅಮೆರಿಕದಲ್ಲಿರುವ ಕನ್ನಡಿಗರು ಮತ್ತು ಭಾರತೀಯರು ಅಲ್ಲಿ ಪ್ರಬಲ ರಾಜಕೀಯ ಶಕ್ತಿ ಹೊಂದಿರುವ ಯಹೂದಿಗಳಿಗಿಂತ ಹೆಚ್ಚು ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಸಂಗತಿಯಾಗಿದೆ’ ಎಂದರು.</p>.<p>ಅಮೆರಿಕದಲ್ಲಿರುವ ಕನ್ನಡಿಗರು ರಾಜ್ಯ ಸರಕಾರ ಮತ್ತು ಆ ದೇಶಗಳ ನಡುವೆ ಕೊಂಡಿಯಂತೆ ಕೆಲಸ ಮಾಡುತ್ತಿರುವುದು ಗಮನಾರ್ಹವಾಗಿದೆ. ಈಗ ಅಮೆರಿಕದ ಕಂಪನಿಗಳಿಗೆ ಬೆಂಗಳೂರಿನಿಂದ ನುರಿತ ಮಾನವ ಸಂಪನ್ಮೂಲವನ್ನು ಒದಗಿಸಲು ಕರ್ನಾಟಕ ಸರಕಾರವು `ಸಿಲಿಕಾನ್ ವ್ಯಾಲಿ ಬ್ರಿಡ್ಜ್’ ಎನ್ನುವ ಹೊಸ ಉಪಕ್ರಮವನ್ನು ಆರಂಭಿಸಿದೆ ಎಂದು ಅವರು ನುಡಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/bts-2021-we-are-in-talks-of-launching-a-silicon-valley-talent-bridge-says-cn-ashwath-narayan-885259.html" itemprop="url">ಬೆಂಗಳೂರಿನಲ್ಲಿ ಸ್ಟಾರ್ಟಪ್ ಸಿಲಿಕ್ಯಾನ್ ವ್ಯಾಲಿ ಬ್ರಿಡ್ಜ್ ರಚನೆ: ಅಶ್ವತ್ಥನಾರಾಯಣ </a></p>.<p>ಕನ್ನಡಿಗರು ಕರ್ನಾಟಕಕ್ಕೆ ಸೀಮಿತವಾಗದೆ ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ, ವೈದ್ಯಕೀಯ ರಂಗಗಳಲ್ಲಿ ಛಾಪು ಮೂಡಿಸಿರುವುದು ಅನುಕರಣೀಯ ನಡೆಯಾಗಿದೆ. ಈಗಿನ ವರ್ಚುಯಲ್ ಮತ್ತು ಹೈಬ್ರಿಡ್ ಜಗತ್ತಿನಲ್ಲಿ ಅಮೆರಿಕದ ಕನ್ನಡಿಗರು ನಮಗೆ ಇನ್ನಷ್ಟು ಹತ್ತಿರವಾಗಿದ್ದಾರೆ ಎಂದು ಸಚಿವರು ಬಣ್ಣಿಸಿದರು.</p>.<p>ಎನ್ಇಪಿ ಮತ್ತು ಇನ್ನಿತರ ಉಪಕ್ರಮಗಳ ಮೂಲಕ ಹೊರನಾಡಿನಿಂದ ಬರುವ ವಿದ್ಯಾರ್ಥಿಗಳನ್ನು ಕನ್ನಡ ಕಲಿಯಲು ಪ್ರೋತ್ಸಾಹಿಸಲಾಗುತ್ತಿದೆ. ಇದಕ್ಕಾಗಿ ಆರು ತಿಂಗಳು ಮಾತ್ರ ಓದುವಂತಹ ಪಠ್ಯವನ್ನು ಅಳವಡಿಸಲಾಗಿದೆ. ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಸಂಕಲ್ಪಬಲದ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವರು ಹೇಳಿದರು.</p>.<p>ಅಮೆರಿಕದಲ್ಲಿರುವ ಕನ್ನಡಿಗರು ಸಾವಿರಾರು ಮೈಲಿ ಆಚೆ ಇದ್ದರೂ ತಮ್ಮ ಕರುಳಿನ ಭಾಷೆಯನ್ನು ಮರೆಯದೆ, ಅರ್ಥಪೂರ್ಣವಾಗಿ ಬೆಳೆಸುತ್ತಿದ್ದಾರೆ. ಇದು ಅನುಸರಣೀಯ ಮಾದರಿಯಾಗಿದೆ. ಇದರಿಂದ ಕನ್ನಡವು ಮತ್ತಷ್ಟು ಶಕ್ತಿಶಾಲಿಯಾಗಿ ಬೆಳೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್, ಅಕ್ಕ ಸಂಘಟನೆಯ ಅಧ್ಯಕ್ಷ ತುಮಕೂರು ದಯಾನಂದ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>