‘ವಿಧಾನಸಭೆಯಲ್ಲಿ ಎಸ್ಸಿ, ಎಸ್ಟಿಯ 52 ಶಾಸಕರಿದ್ದಾರೆ. ಆದರೆ ರಾಜ್ಯದ ಚುಕ್ಕಾಣಿ ಹಿಡಿಯಲು ಆಗಲಿಲ್ಲ. ನಮ್ಮವರು ಮುಖ್ಯಮಂತ್ರಿ ಆಗಲಿಲ್ಲ. ಬೇರೆ ಪಕ್ಷದಿಂದ ಬಂದ ಕೇವಲ 13 ಶಾಸಕರಿಂದ ಬಿ.ಎಸ್.ಯಡಿಯೂರಪ್ಪ ಸಿ.ಎಂ ಆದರು. ನಾವು ಎಸ್ಸಿ, ಎಸ್ಟಿ ಎಂದು ಕಚ್ಚಾಡುವುದನ್ನು ನಿಲ್ಲಿಸಬೇಕು. ಎಸ್ಸಿಯಲ್ಲಿರುವ 101 ಜಾತಿ, ಎಸ್ಟಿಯಲ್ಲಿರುವ 50 ಜಾತಿಗಳು ಒಂದಾಗಬೇಕು. ಅದಕ್ಕಾಗಿ ಈ ಸಮುದಾಯಗಳ ಸ್ವಾಮೀಜಿಗಳು ಸೇರಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು’ ಎಂದೂ ಸಲಹೆ ನೀಡಿದರು.